ಮದರಸಾದ ಬಾಗಿಲಿಗೆ ಚಿಲಕ ಹಾಕಿತ್ತಾದರೂ ಬೀಗ ಹಾಕಿರಲಿಲ್ಲ. ಇದರಿಂದ ಸುಲಭವಾಗಿ ಮದರಸಾದೊಳಗೆ ನುಗ್ಗಿದ ಕಿಡಿಗೇಡಿಗಳು ನಮಾಝ್‌ಗೆ ಬಳಸುವ ಮುಸಲ್ಲಾವನ್ನು ಡೆಸ್ಕ್‌ನ ಮೇಲಿಟ್ಟು ಬೆಂಕಿ ಹಚ್ಚಿದ್ದಾರೆ.

ಬಂಟ್ವಾಳ: ಮದರಸಾವೊಂದರ ಬಾಗಿಲು ತೆರೆದು ಒಳಗೆ ಪ್ರವೇಶಿದ ಕಿಡಿಗೇಡಿಗಳು ಮರದ ಪೀಠೋಪಕರಣಗಳಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆಪೊಲೀಸ್‌ ಠಾಣಾ ವ್ಯಾಪ್ತಿಯ ಕುಕ್ಕಿಪ್ಪಾಡಿ ಗ್ರಾಮದ ಎಲ್ಪೆಲ್‌ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

Add Asianetnews Kannada as a Preferred SourcegooglePreferred

ಮದರಸಾದ ಬಾಗಿಲಿಗೆ ಚಿಲಕ ಹಾಕಿತ್ತಾದರೂ ಬೀಗ ಹಾಕಿರಲಿಲ್ಲ. ಇದರಿಂದ ಸುಲಭವಾಗಿ ಮದರಸಾದೊಳಗೆ ನುಗ್ಗಿದ ಕಿಡಿಗೇಡಿಗಳು ನಮಾಝ್‌ಗೆ ಬಳಸುವ ಮುಸಲ್ಲಾವನ್ನು ಡೆಸ್ಕ್‌ನ ಮೇಲಿಟ್ಟು ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಮಾವಿನಕಟ್ಟೆಜುಮಾ ಮಸೀದಿ ಅಧ್ಯಕ್ಷ ಅಬ್ದುಲ್‌ ರಝಾಕ್‌ ಪುಂಜಾಲಕಟ್ಟೆಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.