ರಾಜ್ಯಸಭಾ ಸಂಸದ ಸ್ಥಾನಕ್ಕೆ ಮಿಥುನ್ ಚಕ್ರವರ್ತಿ ರಾಜಿನಾಮೆ
ತೃಣಮೂಲ ಕಾಂಗ್ರೆಸ್ ರಾಜ್ಯಸಭೆ ಸಂಸದ ಮಿಥುನ್ ಚಕ್ರವರ್ತಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ನವದೆಹಲಿ (ಡಿ. 26): ತೃಣಮೂಲ ಕಾಂಗ್ರೆಸ್ ರಾಜ್ಯಸಭೆ ಸಂಸದ ಮಿಥುನ್ ಚಕ್ರವರ್ತಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಿಥುನ್ ಚಕ್ರವರ್ತಿ ತಮ್ಮ ರಾಜಿನಾಮೆ ಪತ್ರವನ್ನು ರಾಜ್ಯಸಭಾ ಚೇರ್ ಮನ್ ಹಮೀದ್ ಅನ್ಸಾರಿಗೆ ಸಲ್ಲಿಸಿದ್ದಾರೆ. ಅನಾರೋಗ್ಯ ಕಾರಣದಿಂದ ರಾಜಿನಾಮೆ ನೀಡಿದ್ದಾರೆಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ಕಡಿಮೆ ಹಾಜರಾತಿ, 3 ದಿನಗಳಿಗೊಮ್ಮೆ ಸಂಸತ್ತಿಗೆ ಹಾಜರಾಗುವುದು, ಯಾವುದೇ ಚರ್ಚೆಯಲ್ಲಿ ಭಾಗವಹಿಸದೇ ಇರುವುದು ಅಥವಾ ಸದನದಲ್ಲಿ ಪ್ರಶ್ನೆಯನ್ನೇ ಕೇಳುವುದಿಲ್ಲ ಎಂಬ ಆರೋಪ ಮಿಥುನ್ ಚಕ್ರವರ್ತಿ ಮೇಲಿದೆ.