ಜೆಡಿಎಸ್’ಗೆ ಮರಳುವುದು ಕನಸಿನ ಮಾತು, ಬಿಜೆಪಿ ಒಡೆದ ಮನೆಯಾಗಿದೆ ಹಾಗಾಗಿ ಕಾಂಗ್ರೆಸ್‌ ಸೇರಲು ಇಚ್ಚಿಸಿದ್ದೇನೆ ಎಂದು ಪಾಟೀಲ್ ಹೇಳಿದ್ದಾರೆ.

ಕಲಬುರಗಿ (ಜ.15): ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ ಆರ್ ಪಾಟೀಲ್ ಕಾಂಗ್ರೆಸ್‌’ಗೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಲಬುರಗಿಯಲ್ಲಿ ಮಾತನಾಡಿದ ಪಾಟೀಲ್, ಜಾತ್ಯತೀತತೆ ಉಳಿಬೇಕಾದರೆ ಬಿಜೆಪಿಯೇತರ ಪಕ್ಷಗಳ ಒಗ್ಗೂಡುವಿಕೆಯ ಅಗತ್ಯವಿದೆ, ಹಾಗಾಗಿ ಕಾಂಗ್ರೆಸ್‌ ಸೇರಲು ಇಚ್ಛೆ ಹೊಂದಿದ್ದೇನೆ, ಇದಕ್ಕೆ ಆ ಪಕ್ಷದ ಎಲ್ಲಾ ಮುಖಂಡರ ಬೆಂಬಲದ ವಿಶ್ವಾಸವಿದೆ ಎಂದಿದ್ದಾರೆ.

ಜೆಡಿಎಸ್’ಗೆ ಮರಳುವುದು ಕನಸಿನ ಮಾತು, ಬಿಜೆಪಿ ಒಡೆದ ಮನೆಯಾಗಿದೆ ಹಾಗಾಗಿ ಕಾಂಗ್ರೆಸ್‌ ಸೇರಲು ಇಚ್ಚಿಸಿದ್ದೇನೆ ಎಂದು ಪಾಟೀಲ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ನೋಟು ಅಪಮೌಲ್ಯಗೊಳಿಸಿದ ರೀತಿಯಲ್ಲೇ ಗಾಂಧಿಜೀಯನ್ನು ಅಪಮೌಲ್ಯಗೊಳಿಸಲು ಬಿಜೆಪಿ ಹೊರಟಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಬ್ರಿಗೇಡ್ ಮೂಲಕ ಒಳಜಗಳ ಸೃಷ್ಟಿಸಿ ಮೂರನೇಯವರಿಗೆ ಲಾಭ ಮಾಡಿಕೊಡುವುದು ಆರೆಸ್ಸೆಸ್’ನ ಅಜೆಂಡಾ ಆಗಿದೆ ಎಂದು ಅವರು ಹೇಳಿದ್ದಾರೆ.