ಪ್ರಕರಣ ದಾಖಲಿಸಿಕೊಂಡು ಶೋಧ ಆರಂಭಿಸಿದ್ದ ಸಿಪಿಐ ದೀಪಕ್ ಭೂಸರೆಡ್ಡಿ ನೇತೃತ್ವದ ತಂಡ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಾಗರಾಜ್ ಅವರನ್ನು ಪತ್ತೆಮಾಡಿದ್ದಾರೆ

ಕಾರಟಗಿ(ಆ.01): ಕಳೆದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಶಾಸಕ, ಮಾಜಿ ಸಚಿವ ಶಿವರಾಜ್ ತಂಗಡಗಿ ಸಹೋದರ ನಾಗರಾಜ್ ತಂಗಡಗಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಜು. 24ರಂದು ನಾಗರಾಜ್ ತಂಗಡಗಿ ಕ್ಷೌರ ಮಾಡಿಸಿಕೊಂಡು ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ಸಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಹೋದರ ರವಿ ತಂಗಡಗಿ ಕಾರಟಗಿ ಠಾಣೆಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಶೋಧ ಆರಂಭಿಸಿದ್ದ ಸಿಪಿಐ ದೀಪಕ್ ಭೂಸರೆಡ್ಡಿ ನೇತೃತ್ವದ ತಂಡ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಾಗರಾಜ್ ಅವರನ್ನು ಪತ್ತೆಮಾಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred