ತ್ರಿವಳಿ ತಲಾಖ್ ಪ್ರಶ್ನಿಸಿ ಶಾಹಿರಾ ಭಾನು ಎಂಬ ಮಹಿಳೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ರು. ಪಾರ್ಲಿಮೆಂಟ್'ನಲ್ಲಿ ಇದಕ್ಕೆ ಅಗತ್ಯ ಇರುವ ಕಾನೂನನ್ನು ಸಂಸತ್'ನಲ್ಲಿ ಅಂಗೀಕರಿಸಲಾಗಿದೆ. ತ್ರಿವಳಿ ತಲಾಕ್'ಗೆ ಇತಿಶ್ರೀ ಹಾಡಲು ಕಾನೂನು ರೂಪಿಸಿದೆ. ಅದು ಇವತ್ತು ರಾಜ್ಯ ಸಭೆ ಮುಂದೆ ಬರಬೇಕಿದೆ ಆದರೆ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ತ್ರಿವಳಿ ತಲಾಕ್ ಮಸೂದೆಗೆ ಒಪ್ಪಲ್ಲ. ಯಾವುದೇ ಕಾರಣಕ್ಕೂ ಮಸೂದೆ ಜಾರಿಗೆ ಬಿಡಲ್ಲ ಎಂದಿದ್ದಾರೆ ಎಂದು ಶಾಸಕ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜ.01): ತ್ರಿವಳಿ ತಲಾಖ್ ಪ್ರಶ್ನಿಸಿ ಶಾಹಿರಾ ಭಾನು ಎಂಬ ಮಹಿಳೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ರು. ಪಾರ್ಲಿಮೆಂಟ್'ನಲ್ಲಿ ಇದಕ್ಕೆ ಅಗತ್ಯ ಇರುವ ಕಾನೂನನ್ನು ಸಂಸತ್'ನಲ್ಲಿ ಅಂಗೀಕರಿಸಲಾಗಿದೆ. ತ್ರಿವಳಿ ತಲಾಕ್'ಗೆ ಇತಿಶ್ರೀ ಹಾಡಲು ಕಾನೂನು ರೂಪಿಸಿದೆ. ಅದು ಇವತ್ತು ರಾಜ್ಯ ಸಭೆ ಮುಂದೆ ಬರಬೇಕಿದೆ ಆದರೆ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ತ್ರಿವಳಿ ತಲಾಕ್ ಮಸೂದೆಗೆ ಒಪ್ಪಲ್ಲ. ಯಾವುದೇ ಕಾರಣಕ್ಕೂ ಮಸೂದೆ ಜಾರಿಗೆ ಬಿಡಲ್ಲ ಎಂದಿದ್ದಾರೆ ಎಂದು ಶಾಸಕ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ನಾವು ಸಿಎಂ ಸಿದ್ದರಾಮಯ್ಯ ಅವರಿಗೆ ಕೇಳೋದು ಇಷ್ಟೇ. ತ್ರಿವಳಿ ತಲಾಖ್ ವಿಚಾರದಲ್ಲಿ ಯಾವುದೇ ವೋಟ್ ಬ್ಯಾಂಕ್ ರಾಜಕಾರಣ ಬೇಡ. ಈ ವಿಚಾರದಲ್ಲಿ ಮಹಿಳೆಯರ ಸಬಲೀಕರಣ ಆಗಬೇಕಿದೆ. ಸುಪ್ರೀಂಕೋರ್ಟ್ ಆದೇಶ ಹೊರ ಬಂದ ಬಳಿಕ 300 ಕ್ಕೂ ಹೆಚ್ಚು ತಲಾಕ್ ಆಗಿವೆ. ಮೆಸೇಜ್ ಮೂಲಕ ತಲಾಖ್ ನೀಡುತ್ತಾರೆ. ಹೀಗಾಗಿ ಈ ಮಸೂದೆ ಅಂಗೀಕಾರ ಮಾಡುವುದಕ್ಕೆ ಕಾಂಗ್ರೆಸ್ ಬೆಂಬಲ ನೀಡಬೇಕು. ಧರ್ಮದ ಆಧಾರದ ಮೇಲೆ ಇದನ್ನ ನೋಡಬೇಡಿ. ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಿಕೊಡಬೇಕು. ಸಿಎಂ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ರಾಜ್ಯದ ಮುಸ್ಲಿಂ ಬಾಂಧವರು ಎದುರು ನೋಡುತ್ತಿದ್ದಾರೆ, ಅವರು ಉತ್ತರಿಸ ಬೇಕು ಎಂದು ಶಾಸಕ ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.

Scroll to load tweet…