ಪ್ರಧಾನಿ ಮೋದಿಯಿಂದ ಟಿಆರ್’ಪಿ ರಾಜಕೀಯ: ರಾಹುಲ್ ವಾಗ್ದಾಳಿ
ಪ್ರಧಾನಿ ಮೋದಿ ಟಿಆರ್ಪಿ ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿಯವರ ಅದಕ್ಷತೆ ಪರಿಣಾಮವಾಗಿ ದೇಶಕ್ಕೆ ಹಾನಿಯಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿ (ಡಿ.01): 500, 1000 ನೋಟ್ ನಿಷೇಧದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಟಿಆರ್ಪಿ ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿಯವರ ಅದಕ್ಷತೆ ಪರಿಣಾಮವಾಗಿ ದೇಶಕ್ಕೆ ಹಾನಿಯಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮುಂದುವರೆದು, ತಮ್ಮ ಘನತೆಗೆ ಧಕ್ಕೆ ಬರದಂತೆ ಪ್ರಧಾನಿ ಟಿಆರ್’ಪಿ ಕಾರ್ಯಕ್ರಮಗಳನ್ನು ಮಾಡಲು ಮುಂದಾಗಿದ್ದಾರೆ ಎಂದು ರಾಹುಲ್ ಆಪಾದಿಸಿದ್ದಾರೆ.
ಯುಪಿಎ ಅಧಿಕಾರ ಅವಧಿಯಲ್ಲಿ ಈ ತರಹದ ಆಡಳಿತ ಯಾರೂ ಮಾಡಿರಲಿಲ್ಲ ಎಂದು ರಾಹುಲ್ ಗಾಂಧಿ ಪಕ್ಷವನ್ನು ಸಮರ್ಥಿಸಿಕೊಂಡಿದ್ದಾರೆ.