ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 29ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅಂದು ಬೆಂಗಳೂರಿಗೆ ಆಗಮಿಸಲಿ ರುವ ಪ್ರಧಾನಿ, ಮಹಾನಗರದಲ್ಲಿ ಹಮ್ಮಿಕೊಂಡಿರುವ ಆದಿಚುಂಚನಗಿರಿ ಮಠದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 29ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂದು ಬೆಂಗಳೂರಿಗೆ ಆಗಮಿಸಲಿ ರುವ ಪ್ರಧಾನಿ, ಮಹಾನಗರದಲ್ಲಿ ಹಮ್ಮಿಕೊಂಡಿರುವ ಆದಿಚುಂಚನಗಿರಿ ಮಠದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.

ಅಲ್ಲಿಂದ ಬೀದರ್‌ಗೆ ತೆರಳಲಿದ್ದು, ಕಲಬುರಗಿ-ಬೀದರ್ ಮಧ್ಯೆ ಈಗಾಗಲೇ ಪೂರ್ಣಗೊಂಡಿರುವ 104 ಕಿ.ಮೀ. ಉದ್ದದ ರೈಲುಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಈ ಬಗ್ಗೆ ಬೀದರ್ ಸಂಸದ ಭಗವಂತ ಖೂಬಾ ದೀಪಾವಳಿ ನರಕ ಚತುರ್ದಶಿ ದಿನದಂದು ಟ್ವೀಟ್ ಮಾಡಿದ್ದಾರೆ. ಬಳಿಕ ಅವರು ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಹಿಂದಿರುಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.