ಹಿರಿಯ ರಾಜಕಾರಣಿ ಹಾಗೂ ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ.ಎಂ.ವೀರಪ್ಪ ಮೊಯ್ಲಿ ಅವರ ಮೂರನೇ ಮಹಾಕಾವ್ಯ ‘ಶ್ರೀ ಬಾಹುಬಲಿ ಅಹಿಂಸಾದಿಗ್ವಿಜಯಂ’ ಶ್ರವಣಬೆಳಗೊಳದಲ್ಲಿ ಬುಧವಾರ (ಜ.24) ಲೋಕಾರ್ಪಣೆಗೊಳ್ಳಲಿದೆ.

ಬೆಂಗಳೂರು (ಜ.23): ಹಿರಿಯ ರಾಜಕಾರಣಿ ಹಾಗೂ ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ.ಎಂ.ವೀರಪ್ಪ ಮೊಯ್ಲಿ ಅವರ ಮೂರನೇ ಮಹಾಕಾವ್ಯ ‘ಶ್ರೀ ಬಾಹುಬಲಿ ಅಹಿಂಸಾದಿಗ್ವಿಜಯಂ’ ಶ್ರವಣಬೆಳಗೊಳದಲ್ಲಿ ಬುಧವಾರ (ಜ.24) ಲೋಕಾರ್ಪಣೆಗೊಳ್ಳಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಾಹುಬಲಿ ಕುರಿತು ಮಹಾಕಾವ್ಯ ರಚಿಸುವ ವೇಳೆ ಮನಸ್ಸು ಸಾತ್ವಿಕವಾಗಿರಬೇಕು ಎಂಬ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಮೀನು ಸೇವನೆಯನ್ನು ತ್ಯಜಿಸಿದ್ದೇನೆ ಎಂದು ಎಂ.ವೀರಪ್ಪ ಮೊಯ್ಲಿ ಹೇಳಿದರು. ತಪಸ್ವಿ ಮನಸ್ಥಿತಿ ಹೊಂದಿದ್ದರೆ ಮಾತ್ರ ಇಂತಹ ಮಹಾಕಾವ್ಯ ರಚಿಸಲು ಸಾಧ್ಯವಾಗಲಿದ್ದು, ಮನದಲ್ಲಿ ಮೂಡುವ ಹಿಂಸಾತ್ಮಕ ಗುಣಗಳನ್ನು ಚಿವುಟಿ ಹಾಕಬೇಕಾಗುತ್ತದೆ. ಹೀಗಾಗಿ ಬಾಹುಬಲಿ ಕುರಿತ ಮಹಾಕಾವ್ಯ ಬರೆಯಲು ಒಂದು ವರ್ಷದಿಂದ ಮೀನು ಸೇವನೆ ಯನ್ನು ತ್ಯಜಿಸಿದ್ದೇನೆ ಎಂದರು.

ಶ್ರವಣಬೆಳಗೊಳದ ಗೊಮ್ಮಟನಗರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಮಹಾಕಾವ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಮಾಹೇಶ್ವರಿ ಪ್ರಕಾಶನವುಮಹಾಕಾವ್ಯವನ್ನು ಹೊರತಂದಿದೆ.