ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಅವಧಿಯಲ್ಲಿ ಭಾರೀ ಮಳೆ ಸುರಿದು ಜಲಾಶಯಗಳೆಲ್ಲಾ ಉಕ್ಕಿ ಹರಿಯುತ್ತಿದ್ದರೂ, ಈಗಲೂ ಕರ್ನಾಟಕದ 16 ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. 

ನವದೆಹಲಿ: ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಅವಧಿಯಲ್ಲಿ ಭಾರೀ ಮಳೆ ಸುರಿದು ಜಲಾಶಯಗಳೆಲ್ಲಾ ಉಕ್ಕಿ ಹರಿಯುತ್ತಿದ್ದರೂ, ಈಗಲೂ ಕರ್ನಾಟಕದ 16 ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ, ಈ ಪೈಕಿ 2 ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ ಕೊರತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಇಡೀ ದಕ್ಷಿಣ ಭಾರ ತದ ಚಿತ್ರಣ ಗಮನಿಸಿದರೆ ಒಟ್ಟಾರೆ ಶೇ.40ರಷ್ಟು ಮಳೆ ಕೊರತೆ ಇದೆ. ದಕ್ಷಿಣ ಭಾರತದ 125 ರ ಪೈಕಿ 54 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. 

ತಮಿಳುನಾಡಿನ 32ರ ಪೈಕಿ 20 ಜಿಲ್ಲೆಗಳಲ್ಲಿ, ತೆಲಂಗಾಣದ ಆರು, ಆಂಧ್ರಪ್ರದೇಶದ 6 ಜಿಲ್ಲೆಗಳಲ್ಲಿ, ಪುದುಚೇರಿ ಯ ಎಲ್ಲ 4 ಜಿಲ್ಲೆಗಳಲ್ಲಿ ಮಳೆ ಕೊರತೆಯಿದೆ ಕೇರಳದ 10 ಜಿಲ್ಲೆಗಳಲ್ಲಿ ಹೆಚ್ಚುವರಿ ಮಳೆಯಾಗಿದ್ದರೆ, ಎರಡು ಜಿಲ್ಲೆಗಳಲ್ಲಿ ತೀವ್ರ ಹೆಚ್ಚಳವಾಗಿದೆ.