ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ  ರಾತ್ರಿ ಊಟ ಸೇವಿಸಿದ 103 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.  ಫುಡ್ ​​ಪಾಯಿಸನ್​ನಿಂದ 103 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ.  ನಿ

ಬೆಂಗಳೂರು (ಡಿ. 31): ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ರಾತ್ರಿ ಊಟ ಸೇವಿಸಿದ 103 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಫುಡ್ ​​ಪಾಯಿಸನ್​ನಿಂದ 103 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ಊಟ ಮಾಡಿದ‌ ಬಳಿಕ ಮಕ್ಕಳಿಗೆ ವಾಂತಿ ಶುರುವಾಗಿದೆ. 

103 ವಿದ್ಯಾರ್ಥಿಗಳಿಗೆ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗಿದೆ. ಈ ವೇಳೆ ಫುಡ್ ಪಾಯ್ಸನ್ ನಿಂದಾಗಿ ಘಟನೆ ಆಗಿರುವುದು ಬೆಳಕಿಗೆ ಬಂದಿದೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.