ರಾಜೀವ್‌ ಹಂತಕನಾದ ತನ್ನ ಮಗನಿಗೆ ದಯಾಮರಣ ನೀಡುವಂತೆ ಪೆರಾರಿವಾಲನ್‌ ಅವರ ತಾಯಿ ಮನವಿ ಮಾಡಿದ್ದಾರೆ.

ಚೆನ್ನೈ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹತ್ಯೆಗೈದ ಪ್ರಕರಣ ಸಂಬಂಧ ಜೈಲು ಶಿಕ್ಷೆ ಅನುಭವಿಸುತ್ತಿರುವ 7 ಮಂದಿಗೆ ಕ್ಷಮಾಪಣೆ ನೀಡಿ, ಅವರನ್ನು ಬಿಡುಗಡೆ ಮಾಡಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ತಿರಸ್ಕರಿಸಿದ ಬೆನ್ನಲ್ಲೇ, ರಾಜೀವ್‌ ಹಂತಕನಾದ ತನ್ನ ಮಗನಿಗೆ ದಯಾಮರಣ ನೀಡುವಂತೆ ಪೆರಾರಿವಾಲನ್‌ ಅವರ ತಾಯಿ ಮನವಿ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ನನ್ನ ಮಗ ಸೇರಿದಂತೆ ರಾಜೀವ್‌ ಹಂತಕರ ಎಲ್ಲರಿಗೂ ಕ್ಷಮಾದಾನ ನೀಡಿ ಬಿಡುಗಡೆ ಮಾಡಲು ಸಾಧ್ಯವಾಗದಿದ್ದರೆ, ನನ್ನ ಮಗನಿಗೆ ದಯಾ ಮರಣ ಕರುಣಿಸಿ ಎಂದು ರಾಜೀವ್‌ ಹಂತಕರಲ್ಲಿ ಒಬ್ಬನಾದ ಎ.ಜಿ.ಪೆರಾರಿವಾಲನ್‌ ತಾಯಿ ಅರ್ಪುತಾಮ್ಮಳ್‌ ಕೋರಿದ್ದಾರೆ. 

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ದೀರ್ಘಾವಧಿಯ ಕಾನೂನು ಹೋರಾಟದಿಂದ ಮತ್ತು ಇತ್ತೀಚೆಗಿನ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ನಮಗೆ ಇಂಥ ಜೀವನವೇ ಬೇಡ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಮ್ಮನ್ನೆಲ್ಲ ಕೊಲ್ಲುವಂತೆ ಮನವಿ ಮಾಡಲು ನಿರ್ಧರಿಸಿದ್ದೇನೆ. ನನ್ನ ಮಗನಿಗೂ ದಯಾಮರಣ ನೀಡಿ, ಎಂದು ಹೇಳಿದ್ದಾರೆ.