ನರೇಂದ್ರ ಮೋದಿ ದೊಡ್ಡ ಪೆಡಂಭೂತ ಅಲ್ಲ, ಆರ್ ಎಸ್ ಎಸ್ ನಿಷ್ಠೆ ನಮಗ್ಯಾಕಿಲ್ಲ
ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಸಾರ್ವಜನಿಕರಲ್ಲಿ ಮುಟ್ಟಿಸಬೇಕು. ಆರ್ ಎಸ್ ಎಸ್ ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಾರೆ. ಆದರೆ ನಮ್ಮ ಕಾರ್ಯಕರ್ತರಲ್ಲಿ ಆ ರೀತಿಯ ನಿಷ್ಠೆಯಿಲ್ಲ. ಮುಂದಿನ ಲೋಕಸಭಾ ಚುನಾವಣೆಗೆ ನಿಷ್ಠೆಯಿಂದ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಕಾರ್ಯಾಗಾರದಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ
- ಆರ್ ಎಸ್ ಎಸ್ ಕಾರ್ಯಕರ್ತರಿಗಿರುವಷ್ಟು ನಿಷ್ಠೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಇಲ್ಲ
- ಮೋದಿ ಸರ್ಕಾರದ ವೈಫಲ್ಯಗಳನ್ನು ಜನತೆಗೆ ಮುಟ್ಟಿಸುವ ಕೆಲಸ ಮಾಡಬೇಕಿದೆ
- ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಕಾರ್ಯಾಗಾರದಲ್ಲಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ