ರಸ್ತೆ ತೆರವುಗೊಳಿಸಲು ಖುದ್ದು ಫೀಲ್ಡಿಗಿಳಿದ ಸಂಸದ ಪ್ರತಾಪ್ ಸಿಂಹ
’ದಕ್ಷಿಣ ಕಾಶ್ಮೀರ’ ಎಂದೇ ಖ್ಯಾತವಾಗಿರುವ ಕೊಡಗು ಈಗ ಅಕ್ಷರಶಃ ಸ್ಮಶಾನದಂತಾಗಿದೆ. ಇಲ್ಲಿನ ಜನರು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಆ ಭಾಗದಲ್ಲೇ ಇದ್ದು ಸಂತ್ರಸ್ತರ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಸ್ಪಂದಿಸುತ್ತಿದ್ದಾರೆ.
ಕೊಡಗು (ಆ. 21): ’ದಕ್ಷಿಣ ಕಾಶ್ಮೀರ’ ಎಂದೇ ಖ್ಯಾತವಾಗಿರುವ ಕೊಡಗು ಈಗ ಅಕ್ಷರಶಃ ಸ್ಮಶಾನದಂತಾಗಿದೆ. ಇಲ್ಲಿನ ಜನರು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಆ ಭಾಗದಲ್ಲೇ ಇದ್ದು ಸಂತ್ರಸ್ತ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಸ್ಪಂದಿಸುತ್ತಿದ್ದಾರೆ.
ಸೋಮವಾರ ಪೇಟೆ ತಾಲ್ಲೂಕಿನ ಮಾದಾಪುರ , ಹಟ್ಟಿಹೊಳೆ ಮತ್ತು ಮುಕ್ಕೋಡ್ಲು ವಿನಲ್ಲಿ ಭಾರಿ ಮಳೆಯಿಂದಾಗಿ ಸೇತುವೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಅಲ್ಲಿದೆ ಖುದ್ದು ಪ್ರತಾಪ್ ಸಿಂಹ ಭೇಟಿ ನೀಡಿ ಸಾರ್ವಜನಿಕರ ಜೊತೆ ಸೇರಿ ಕಾರ್ಯಾಚರಣೆಗೆ ಕೈ ಜೋಡಿಸಿದರು. ಪ್ರತಾಪ್ ಸಿಂಹರ ಈ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.
ಸುಂಟಿಕೊಪ್ಪ ಹಾಗೂ ಮಾದಾಪುರದಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ತರ ಯೋಗ ಕ್ಷೇಮ ವಿಚಾರಿಸಲಾಯಿತು ಹಾಗೂ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಯಿತು.