ಮಾನವೀಯಯತೆ ಮೆರೆದ ರಾಜಕಾರಣಿ
ಅನಿಲ್ ಹಾಗೂ ಉದಯ್ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಕೊಡುವುದಾಗಿ ಘೋಷಿಸಿದ್ದಾರೆ
ರಾಜಕಾರಣಿ, ಎಂಪಿ ರಾಜೀವ್ ಚಂದ್ರ ಶೇಖರ್ ರವರು ಮಾಸ್ತಿಗುಡಿ ಅವಘಡದಲ್ಲಿ ದುರಂತ ಅಂತ್ಯ ಕಂಡ ನಟ ಅನಿಲ್ ಮತ್ತು ಉದಯ್ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅನಿಲ್ ಹಾಗೂ ಉದಯ್ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಕೊಡುವುದಾಗಿ ಘೋಷಿಸಿದ್ದು ಇಂದು ಸಂಜೆ 6 ಗಂಟೆಗೆ ಚಲನಚಿತ್ರವಾಣಿಜ್ಯಮಂಡಳಿ ಅಧ್ಯಕ್ಷ ಸಾರಾಗೋವಿಂದ್ ಅವರಿಗೆ ಚೆಕ್ ವಿತರಿಸುವುದಾಗಿ ತಿಳಿಸಿದ್ದಾರೆ.