ಮೋದಿಗೆ ಬಿ.ಶ್ರೀರಾಮುಲು ಧನ್ಯವಾದ
ಸಂಸತ್ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದ ನಿಯೋಗದಿಂದ ಸನ್ಮಾನಿಸಿ ಧನ್ಯವಾದ ಸಲ್ಲಿಸಿದ್ದಾರೆ.
ನವದೆಹಲಿ(ಮಾ.22): ಪರಿಶಿಷ್ಟ ಪಂಗಡಕ್ಕೆ ತಳವಾರ, ಪರಿವಾರ ಸಮುದಾಯ ಸೇರ್ಪಡೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸದ ಬಿ.ಶ್ರೀರಾಮುಲು ಧನ್ಯವಾದ ಸಲ್ಲಿಸಿದ್ದಾರೆ.
ಸಂಸತ್ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದ ನಿಯೋಗದಿಂದ ಸನ್ಮಾನಿಸಿ ಧನ್ಯವಾದ ಸಲ್ಲಿಸಿದ್ದಾರೆ. ಕರ್ನಾಟಕದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಸಂಸದ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿರುವ ತಳವಾರ, ಪರಿವಾರ ಸಮುದಾಯದ ಮುಖಂಡರು ಹಾಜರಿದ್ದರು.