ವರದಕ್ಷಿಣೆ ತರಲಿಲ್ಲ ಎಂದು ಗರ್ಭಿಣಿಗೆ ಬೆಂಕಿ ಹಚ್ಚಿ ಗಂಡನ ಮನೆಯವರು ಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ತಪಸ್ಸಿ ಗ್ರಾಮದಲ್ಲಿ ನಡೆದಿದೆ. 

ಬೆಳಗಾವಿ :  ವರದಕ್ಷಿಣೆಗಾಗಿ ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ತಪಸ್ಸಿ ಗ್ರಾಮದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪತಿ ಸಿದ್ದಪ್ಪ ಹಾಗೂ ಅತ್ತೆ, ಮಾವ ಸೇರಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಗರ್ಭಿಣಿ ಅನುಸೂಯಾ (27) ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ. ಅನುಸೂಯಾ ತಂದೆಯ ಜಮೀನು ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದಿದ್ದು, ಪತಿಯ ಮಾತನ್ನು ಕೇಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸೇರಿ ಹತ್ಯೆಗೆ ಯತ್ನ ಮಾಡಿದ್ದಾರೆ. 

ಸದ್ಯ ಈ ಸಂಬಂಧ ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಸಿದ್ದಪ್ಪ ಸೇರಿ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಸದ್ಯ ಪೊಲೀಸರು ಶೋಧ ನಡೆಸುತ್ತಿದ್ದಾರೆ.