ಈ ಹಿಂದೆ ಆರ್‌ಬಿಐ ಗವರ‌್ನರ್ ಆಗಿದ್ದ ರಘುರಾಂ ರಾಜನ್, ಬ್ಯಾಂಕ್‌ಗಳಿಗೆ ಭಾರೀ ಪ್ರಮಾಣದ ಸಾಲ ಉಳಿಸಿಕೊಂಡ ಉದ್ಯಮಿಗಳ ಪಟ್ಟಿಯೊಂದನ್ನು ಪ್ರಧಾನಿ ಕಚೇರಿಗೆ ಸಲ್ಲಿಸಿ, ಕ್ರಮಕ್ಕೆ ಶಿಫಾರಸು ಮಾಡಿದ್ದರು.

ನವದೆಹಲಿ[ಸೆ.25]: ಬ್ಯಾಂಕ್‌ಗಳಿಗೆ ನೂರಾರು ಕೋಟಿ ರು. ವಂಚಿಸಿದವರು ವಿದೇಶಗಳಿಗೆ ಪರಾರಿಯಾಗಲು ಎನ್‌ಡಿಎ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂಬ ವಿಪಕ್ಷಗಳ ಆರೋಪದ ನಡುವೆಯೇ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅವರದ್ದೇ ಪಕ್ಷದ ಮುರಳಿ ಮನೋಹರ್ ಜೋಶಿ ಮುಜುಗರ ತರುವಂಥ ನಡೆ ಇಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಈ ಹಿಂದೆ ಆರ್‌ಬಿಐ ಗವರ್ನರ್ ಆಗಿದ್ದ ರಘುರಾಂ ರಾಜನ್, ಬ್ಯಾಂಕ್‌ಗಳಿಗೆ ಭಾರೀ ಪ್ರಮಾಣದ ಸಾಲ ಉಳಿಸಿಕೊಂಡ ಉದ್ಯಮಿಗಳ ಪಟ್ಟಿಯೊಂದನ್ನು ಪ್ರಧಾನಿ ಕಚೇರಿಗೆ ಸಲ್ಲಿಸಿ, ಕ್ರಮಕ್ಕೆ ಶಿಫಾರಸು ಮಾಡಿದ್ದರು. ಆ ಪಟ್ಟಿಯಲ್ಲಿ ಯಾರ್ಯಾರ ಹೆಸರಿತ್ತು? ಅಂಥವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ಮಾಹಿತಿ ಕೋಡಿ ಎಂದು ಇದೀಗ ಜೋಷಿ ಅಧ್ಯಕ್ಷರಾಗಿರುವ ಸಂಸತ್ತಿನ ಅಂದಾಜು ಸಮಿತಿ ಪ್ರಧಾನಿ ಕಚೇರಿಗೆ ಸೂಚಿಸಿದೆ.

ಈ ವರದಿಯಲ್ಲಿ, ಈಗಾಗಲೇ ಪರಾರಿಯಾಗಿರುವ ಮಲ್ಯ, ಚೋಕ್ಸಿ, ನೀರವ್ ಮೋದಿ ಹೆಸರು ಇದ್ದಿದ್ದು ಪತ್ತೆಯಾದರೆ, ಎನ್‌ಡಿಎ ಸರ್ಕಾರಕ್ಕೆ ಮತ್ತೆ ಸಮಸ್ಯೆ ತಂದೊಡ್ಡುವ ಸಾಧ್ಯತೆ ಇದೆ.