ಚುನಾವಣಾ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಡಳಿತದಲ್ಲಿ ರಿ ಶಫಲ್ ಮಾಡಲಾಗಿದೆ.  ಹಾಸನ ಡಿಸಿಯಾಗಿ  ವರ್ಗಾವಣೆ ಹೊಂದಿರುವ ಡಿ.ರಂದೀಪ್ ಸ್ಥಿತಿ ಅತಂತ್ರವಾಗಿದೆ. 

ಬೆಂಗಳೂರು (ಮಾ. 15): ಚುನಾವಣಾ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಡಳಿತದಲ್ಲಿ ರಿ ಶಫಲ್ ಮಾಡಲಾಗಿದೆ. ಹಾಸನ ಡಿಸಿಯಾಗಿ ವರ್ಗಾವಣೆ ಹೊಂದಿರುವ ಡಿ.ರಂದೀಪ್ ಸ್ಥಿತಿ ಅತಂತ್ರವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರದಿಂದ ಎಲ್ಲಿಯೂ ಸ್ಥಳ ನಿಯೋಜನೆ ಮಾಡದ ಹಿನ್ನಲೆಯಲ್ಲಿ ಡಿ. ರಂದೀಪ್ ಮೈಸೂರಿನಲ್ಲಿಯೇ ಉಳಿದಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆಗೆ ತಡೆ ತಂದ ಹಿನ್ನಲೆಯಲ್ಲಿ ಹಾಸನಕ್ಕೆ ವರ್ಗಾವಣೆಯಾಗಿದ್ದ ಡಿ.ರಂದೀಪ್ ಮೈಸೂರಿನಲ್ಲಿಯೇ ಉಳಿಯಬೇಕಾಯಿತು. ಹಾಸನದಲ್ಲಿ ರೋಹಿಣಿ ಮುಂದುವರೆದಿದ್ದಾರೆ. ಮೈಸೂರಿನಲ್ಲಿ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಂದೀಪ್’ಗೆ ಸ್ಥಳ ನಿಯುಕ್ತಿಗೊಳಿಸದ ಪರಿಣಾಮ, ಜಿಲ್ಲಾಧಿಕಾರಿ ನಿವಾಸದಲ್ಲೇ ಉಳಿದಿದ್ದಾರೆ. 

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಅಂತಿಮ ತೀರ್ಪು ಬರುವವರೆಗೂ ಮೈಸೂರಿನಲ್ಲಿ ಮುಂದುವರೆಸುವಂತೆ ರಂದೀಪ್ ಕೇಳಿದ್ದರು. ರಂದೀಪ್ ಮನವಿಗೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಆದೇಶಕ್ಕಾಗಿ ಕಾಯುತ್ತಿದ್ದಾರೆ.