Asianet Suvarna News Asianet Suvarna News

ಮಗನನ್ನು ಉಳಿಸಲು ನಿರೀಕ್ಷಣಾ ಜಾಮೀನಿಗೆ ಮುಂದಾದ ಹ್ಯಾರಿಸ್

ಈಗಾಗಲೇ ನಲಪಾಡ್ ಮೇಲೆ ಐಪಿಸಿ ಸೆಕ್ಷನ್ 341, 506, 143, 144, 146, 147, 326 ಹಾಗೂ 506ಬಿ ಅನ್ವಯ ಕಬ್ಬನ್'ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣಗಳ ಪೈಕಿ 326 ಹಾಗೂ 506 ಬಿ ಸೆಕ್ಷನ್'ಗೆ ನ್ಯಾಯಾಲಯದಲ್ಲೇ ಜಾಮೀನು ಪಡೆಯಬೇಕಿದ್ದು, ಉಳಿದ ಸೆಕ್ಷನ್'ಗಳಿಗೆ ಪೊಲೀಸ್ ಠಾಣೆಯಲ್ಲೇ ಜಾಮೀನು ಸಿಗಲಿದೆ.

NA Harris Wants Save his Son to Seeks Interim Bail

ಬೆಂಗಳೂರು(ಫೆ.18): ವಿಧ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಮೊಹಮ್ಮದ್ ನಲಪಾಡ್ ಅವರನ್ನು ಉಳಿಸಿಕೊಳ್ಳಲು ಶಾಸಕ ಎನ್'ಎ ಹ್ಯಾರಿಸ್ ಮುಂದಾಗಿದ್ದು ಈಗಾಗಲೇ ನಗರದ ಖ್ಯಾತ ಕ್ರಿಮಿನಲ್ ವಕೀಲರೊಬ್ಬರ ಜತೆ ಮಾತುಕತೆ ನಡೆದಿದೆ ಎಂಬ ಮಾಹಿತಿ ಸುವರ್ಣ ನ್ಯೂಸ್'ಗೆ ಉನ್ನತ ಮೂಲಗಳಿಂದ ಲಭ್ಯವಾಗಿದೆ.

ನಲಪಾಡ್ ಮೇಲೆ ದಾಖಲಿಸಲಾಗಿರುವ ಪ್ರಕರಣಗಳ ಪೈಕಿ 326 ಹಾಗೂ 506 ಬಿ ಸೆಕ್ಷನ್'ಗೆ ಕೋರ್ಟ್ ಜಾಮೀನು ಅವಶ್ಯಕವಾಗಿರು ಹಿನ್ನಲೆಯಲ್ಲಿ ಹ್ಯಾರಿಸ್ ತಮ್ಮ ಮಗನಿಗೆ ನಿರೀಕ್ಷಣಾ ಜಾಮೀನು ಪಡೆಯಲು ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈಗಾಗಲೇ ನಲಪಾಡ್ ಮೇಲೆ ಐಪಿಸಿ ಸೆಕ್ಷನ್ 341, 506, 143, 144, 146, 147, 326 ಹಾಗೂ 506ಬಿ ಅನ್ವಯ ಕಬ್ಬನ್'ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣಗಳ ಪೈಕಿ 326 ಹಾಗೂ 506 ಬಿ ಸೆಕ್ಷನ್'ಗೆ ನ್ಯಾಯಾಲಯದಲ್ಲೇ ಜಾಮೀನು ಪಡೆಯಬೇಕಿದ್ದು, ಉಳಿದ ಸೆಕ್ಷನ್'ಗಳಿಗೆ ಪೊಲೀಸ್ ಠಾಣೆಯಲ್ಲೇ ಜಾಮೀನು ಸಿಗಲಿದೆ.

ಒಟ್ಟಾರೆ ಶಾಸಕರ ಪುತ್ರನ ಈ ಗೂಂಡಾಗಿರಿ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.  

Follow Us:
Download App:
  • android
  • ios