ನಾಗದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ: ಮತ್ತೊಮ್ಮೆ ಪರಿಶೀಲನೆಗೆ ಹೈಕೋರ್ಟ್ ಸೂಚನೆ
ನಾಗದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಿಎಸ್ಯಡಿಯೂರಪ್ಪ ಅವರಿಗೆ ಭಾಗಶಃ ರಿಲೀಫ್ ಸಿಕ್ಕಿದೆ.
ಬೆಂಗಳೂರು (ಜ.02): ನಾಗದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಿಎಸ್ ಯಡಿಯೂರಪ್ಪ ಅವರಿಗೆ ಭಾಗಶಃ ರಿಲೀಫ್ ಸಿಕ್ಕಿದೆ.
ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರೂ, ವಿಶೇಷ ನ್ಯಾಯಾಲಯ ಕಾನ್ನಿಜೆನ್ಸ್ ತೆಗೆದುಕೊಂಡು ತನಿಖೆಗೆ ಆದೇಶಿಸಿತ್ತು. ಕೋರ್ಟ್ ತನಿಖೆಗೆ ಆದೇಶಿಸಿ ನೋಟೀಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಸೋಮಣ್ಣ ಹೈಕೋರ್ಟ್ಮೆಟ್ಟಿಲೇರಿದ್ದರು.
ಪ್ರಕರಣದ ತನಿಖೆ ಆದೇಶಿಸಿದ್ದು, ಹಾಗೂ ನೋಟಿಸ್ ಜಾರಿಗೊಳಿಸಿದ್ದು ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಕೆಳ ನ್ಯಾಯಾಲಯಕ್ಕೆ ಮತ್ತೊಮ್ಮೆ ಪರಿಶೀಲಿಸುವಂತೆ ಸೂಚಿಸಿದೆ. ಹೀಗಾಗಿ ಹೈಕೋರ್ಟ್ನಲ್ಲಿ ಜಯ ಸಿಕ್ಕರೂ, ಮತ್ತೊಮ್ಮೆ ಪರಿಶೀಲನೆಗೆ ಸೂಚಿಸಿರುವುದು ಸೋಮಣ್ಣ ಮತ್ತಿತರ ಆರೋಪಿಗಳಿಗೆ ಇನ್ನೂ ಪೂರ್ಣ ಪ್ರಮಾಣದ ರಿಲೀಫ್ ಸಿಕ್ಕಿಲ್ಲ.