ಅಮಾನ್ಯಗೊಂಡ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಿದ ಆರೋಪ ಸಂಬಂಧ ಪೊಲೀಸರು ದಾಖಲಿಸಿರುವ ಪ್ರತ್ಯೇಕ 7 ದೂರುಗಳ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯ ವಿ. ನಾಗರಾಜು ಮತ್ತವರ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.

<!--[if gte mso 9]>Normal0 <w:TrackMoves/> <w:TrackFormatting/> <w:PunctuationKerning/> <w:ValidateAgainstSchemas/> falsefalsefalse <w:DoNotPromoteQF/> EN-INX-NONEKN <w:BreakWrappedTables/> <w:SnapToGridInCell/> <w:WrapTextWithPunct/> <w:UseAsianBreakRules/> <w:DontGrowAutofit/> <w:SplitPgBreakAndParaMark/> <w:DontVertAlignCellWithSp/> <w:DontBreakConstrainedForcedTables/> <w:DontVertAlignInTxbx/> <w:Word11KerningPairs/> <w:CachedColBalance/> MicrosoftInternetExplorer4 <m:dispDef/> <![endif]-->

ಬೆಂಗಳೂರು (ಸೆ.15): ಅಮಾನ್ಯಗೊಂಡ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಿದ ಆರೋಪ ಸಂಬಂಧ ಪೊಲೀಸರು ದಾಖಲಿಸಿರುವ ಪ್ರತ್ಯೇಕ 7 ದೂರುಗಳ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯ ವಿ. ನಾಗರಾಜು ಮತ್ತವರ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.

7 ಪ್ರಕರಣಗಳ ಸಂಬಂಧ ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಿ ನಾಗರಾಜು ಮತ್ತವರ ಪುತ್ರರಿಗೆ ಜಾಮೀನು ನಿರಾಕರಿಸಿತ್ತು. ಇದರಿಂದ ಜಾಮೀನು ಕೋರಿ ಹೈಕೋರ್ಟ್’ಗೆ 7 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆ ನ್ಯಾ. ರತ್ನಕಲಾ ಅವರಿದ್ದ ಏಕ ಸದಸ್ಯ ಪೀಠ ನಡೆಸಿತು. ಸೆ.21 ರಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಅರ್ಜಿದಾರರ ವಿರುದ್ಧ ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಕೋರ್ಟ್’ಗೆ ಒದಗಿಸಲು ಸೂಚಿಸಿತು.

<!--[if gte mso 9]><![endif]--><!--[if gte mso 10]><![endif]--><p>&nbsp;</p><div type="dfp" position=2>Ad2</div>