ವಿದ್ವತ್ ಮೇಲೆ ನಲಪಾಡ್ ಹ್ಯಾರಿಸ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಸಿಬಿ ತನಿಖಾಧಿಕಾರಿಗಳು  ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸಿಸಿಬಿ ಎಸಿಎಂಎಂ ಕೋರ್ಟ್’ಗೆ 600 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಸಿದೆ. 

ಬೆಂಗಳೂರು (ಮೇ. 10): ವಿದ್ವತ್ ಮೇಲೆ ನಲಪಾಡ್ ಹ್ಯಾರಿಸ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖಾಧಿಕಾರಿಗಳು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸಿಸಿಬಿ ಎಸಿಎಂಎಂ ಕೋರ್ಟ್’ಗೆ 600 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಸಿದೆ.

Add Asianetnews Kannada as a Preferred SourcegooglePreferred

ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಸಿಸಿಟಿವಿ ದೃಶ್ಯಗಳನ್ನ ಸಹ ಲಗತ್ತಿಸಲಾಗಿದೆ. ನಲಪಾಡ್ , ಅರುಣ್ ಬಾಬು , ಶ್ರೀ ಕೃಷ್ಣ, ಮಂಜುನಾಥ್ , ಅಶ್ರಫ್ , ಬಾಲಕೃಷ್ಣ , ಅಭಿಶೇಕ್ ಮತ್ತು ನಾಸಿರ್ ವಿರುದ್ದ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮತ್ತೊಬ್ಬ ಆರೋಪಿ ಕೃಷ್ಣ 2014 ರಿಂದಲೂ ಮೊಬೈಲ್ ಬಳಸುತ್ತಿಲ್ಲ. ವಿದೇಶದಲ್ಲಿ ಅಡಗಿರಬಹುದು. ಹುಡುಕಾಟ ನಡೆಸುತ್ತಿದ್ದೇವೆ ಎಂದು‌ ಉಲ್ಲೇಖಿಸಲಾಗಿದೆ.

ಏನಿದು ಪ್ರಕರಣ? 

ಫೆ. 17 ರಂದು ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ನ ಮೇಲೆ ನಲಪಾಡ್ ಅಂಡ್ ಗ್ಯಾಂಗ್ ಮಾರಣಾಂತಿಕ ಹಲ್ಲೆ ನಡೆಸಿತ್ತು. ಸದ್ಯ ನಲಪಾಡ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಆರಂಭವಾಗಬೇಕಿದೆ.