ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪಾ ಕೂಡ ಪರಮೇಶ್ವರ್​ ಆ ರೀತಿ ಹೇಳಿವವರಲ್ಲ. ಯಾವ ಕಾರಣಕ್ಕೆ ಬರುತ್ತಾರೆ ಎಂಬುದನ್ನು ಅವರನ್ನೇ ಕೇಳಿಕೊಳ್ಳಿ ಎಂದರು.

ಮೈಸೂರು(ಮಾ.19): ನಂಜನಗೂಡು ಬೈಲ್​ ಎಲೆಕ್ಷನ್​ ಸಮರ ಜೋರಾಗತೊಡಗಿದ್ದು,ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ನಡೆದಿವೆ. ಬಿಜೆಪಿಯ 25 ಶಾಸಕರು ಕಾಂಗ್ರೆಸ್​ ಸೇರಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್​ ಹೇಳಿಕೆಯನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ಪ್ರಸಾದ್​ ಲೇವಡಿ ಮಾಡಿದ್ದಾರೆ. ಹಿಂದೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಬಂದಾಗ ದಲಿತ ಸಿಎಂ ಮಾಡಲು ಹೊರಟ ಪರಮೇಶ್ವರ್​ ಜೊತೆಗೆ 5 ಜನ ಎಂಎಲ್​ಎ ಕರೆತರಲು ಆಗಲಿಲ್ಲ. ಈಗ 25 ಜನ ಬಿಜೆಪಿ ಶಾಸಕರನ್ನು ಕರೆತರ್ತಾನಾ ಅಂತ ಪ್ರಸಾದ್​ ಪರಮೇಶ್ವರ್​ ಅವರ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪಾ ಕೂಡ ಪರಮೇಶ್ವರ್​ ಆ ರೀತಿ ಹೇಳಿವವರಲ್ಲ. ಯಾವ ಕಾರಣಕ್ಕೆ ಬರುತ್ತಾರೆ ಎಂಬುದನ್ನು ಅವರನ್ನೇ ಕೇಳಿಕೊಳ್ಳಿ ಎಂದರು. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.