ಕಾರು ಮರಕ್ಕೆ ಗುದ್ದಿ ರಾಷ್ಟ್ರೀಯ ಕಾರ್ ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚೆನ್ನೈ (ಮಾ.18): ಕಾರು ಮರಕ್ಕೆ ಗುದ್ದಿ ನ್ಯಾಷನಲ್ ಕಾರ್ ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಇಂದು ಬೆಳಗಿನ ಜಾವ 3.30 ಕ್ಕೆ ಅಪಘಾತ ಸಂಭವಿಸಿದ್ದು ಕಾರಿನ ಒಳಗೆ ಸಿಲುಕಿಕೊಂಡು ಹೊರಬರಲಾಗದೇ ದಂಪತಿಗಳಿಬ್ಬರೂ ಅಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಪಘಾತ ಸಂಭವಿಸಿ ಕಾರಿಗೆ ಬೆಂಕಿ ಹತ್ತಿ ಉರಿಯುತ್ತಿದ್ದರೂ ಸಾರ್ವಜನಿಕರು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದರು . ವಾಹನದ ನೊಂದಣಿ ಸಂಖ್ಯೆ ಮೂಲಕ ಇದು ಕಾರು ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಗೆ ಸಂಬಂಧಿಸಿದ್ದು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.