ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯದೇ ಇರುವ ಹಿನ್ನೆಲೆಯಲ್ಲಿ ಎನ್‌ಡಿಎ ಆಡಳಿತದ ಸಂಸದರು 23 ದಿನಗಳ ವೇತನವನ್ನು ತ್ಯಜಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಬುಧವಾರ ತಿಳಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯದೇ ಇರುವ ಹಿನ್ನೆಲೆಯಲ್ಲಿ ಎನ್‌ಡಿಎ ಆಡಳಿತದ ಸಂಸದರು 23 ದಿನಗಳ ವೇತನವನ್ನು ತ್ಯಜಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಬುಧವಾರ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಕಲಾಪ ವ್ಯರ್ಥವಾಗುವುದಕ್ಕೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಆರೋಪಿಸಿದರು. ವಿರೋಧ ಪಕ್ಷಗಳು ಮಸೂದೆಗಳು ಮಂಡನೆ ಆಗುವುದನ್ನು ತಡೆ ಹಿಡಿದಿವೆ.

ಕಾಂಗ್ರೆಸ್‌ ಮತ್ತು ಇತರ ಪಕ್ಷಗಳ ಪ್ರತಿಭಟನೆಯಿಂದಾಗಿ ಜನರ ತೆರಿಗೆ ಹಣ ಪೋಲಾಗಿದೆ. ಈ ವಿಷಯವಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಚರ್ಚಿಸಿದ್ದು, ಎನ್‌ಡಿಎ ಸಂಸದರು 23 ದಿನಗಳ ವೇತನವನ್ನು ತ್ಯಜಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.