ರಾಷ್ಟ್ರಪತಿ ಚುನಾವಣೆ: ಎನ್'ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ ಮುನ್ನಡೆ
15 ನೇ ರಾಷ್ಟ್ರಪತಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಎನ್ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಮೀರಾ ಕುಮಾರ್''ರನ್ನು ಹಿಂದಿಕ್ಕಿ 2 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಂಜೆ 5 ಗಂಟೆ ಸುಮಾರಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ನವದೆಹಲಿ (ಜು.20): 15 ನೇ ರಾಷ್ಟ್ರಪತಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಎನ್ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಮೀರಾ ಕುಮಾರ್''ರನ್ನು ಹಿಂದಿಕ್ಕಿ 2 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಂಜೆ 5 ಗಂಟೆ ಸುಮಾರಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಬಿಹಾರದಲ್ಲಿ ಕೋವಿಂದ್ ಪರ ನಿತೀಶ್ ಬಣ ಮತ ಹಾಕಿದೆ. ಬಿಹಾರ ಹಾಗೂ ಅಸ್ಸಾಂ ರಾಜ್ಯದಲ್ಲಿ ಕೋವಿಂದ್ಗೆ ಮುನ್ನಡೆ ಸಾಧಿಸಿದ್ದಾರೆ. ಅಸ್ಸಾಂನಲ್ಲಿ ಕೋವಿಂದ್ ಪರ 91, ಮೀರಾ ಪರ 25 ಮತ ಬಿದ್ದಿದ್ದರೆ , ಬಿಹಾರದಲ್ಲಿ ಕೋವಿಂದ್ ಪರ 130, ಮೀರಾ ಪರ 109 ಮತ ಬಿದ್ದಿದೆ. ಎನ್'ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದಾ ಗೆಲ್ಲುವುದು ಬಹುತೇಕ ಖಚಿತವಾಗಿದ್ದರೂ ಫಲಿತಾಂಶಕ್ಕಾಗಿ ಸಂಜೆ 5 ಗಂಟೆವರೆಗೆ ಕಾಯಲೇಬೇಕಾಗಿದೆ.
ಜು. 25 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಮುಕ್ತಾಯಗೊಳ್ಳಲಿದ್ದು ರಾಮನಾಥ್ ಕೋವಿಂದ/ಮೀರಾ ಕುಮಾರ್ ಮುಂದಿನ ರಾಷ್ಟ್ರಪತಿಯಾಗಲಿದ್ದಾರೆ.