Asianet Suvarna News Asianet Suvarna News

ಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಆ್ಯಸಿಡ್‌ ದಾಳಿ: ಘಟನೆ ಬಗ್ಗೆ ಯೋಗಿ ಸಂಶಯ

ಅತ್ಯಾಚಾರ ಮತ್ತು ಆ್ಯಸಿಡ್‌ ದಾಳಿ ಸಂತ್ರಸ್ತೆಯ ಮೇಲೆ  ಶನಿವಾರ ಮತ್ತೆ ಆ್ಯಸಿಡ್‌ ದಾಳಿ ನಡೆಸಲಾಗಿರುವ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

Needs to be seen if it actually happened Yogi Adityanath on acid attack on gang rape survivor

ಲಕ್ನೋ(ಜು.02): ಅತ್ಯಾಚಾರ ಮತ್ತು ಆ್ಯಸಿಡ್‌ ದಾಳಿ ಸಂತ್ರಸ್ತೆಯ ಮೇಲೆ  ಶನಿವಾರ ಮತ್ತೆ ಆ್ಯಸಿಡ್‌ ದಾಳಿ ನಡೆಸಲಾಗಿರುವ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ವಾಸ್ತವದಲ್ಲಿ ಏನು ನಡೆದಿದೆ ಎಂದು ತಿಳಿದುಕೊಳ್ಳಬೇಕು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದೆ, ತನಿಖೆಯ ಬಳಿಕ ಆ್ಯಸಿಡ್‌ ದಾಳಿ ನಡೆದಿದೆಯೋ ಇಲ್ಲವೋ ಗೊತ್ತಾಗುತ್ತದೆ ಎಂದು ಯೋಗಿ ಹೇಳಿದ್ದಾರೆ.

ಯೋಗಿ ಸರ್ಕಾರದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆಯೆಂದು ಪ್ರತಿಪಕ್ಷಗಳು ಆರೋಪಿಸಿವೆ. ಯೋಗಿ ಆಡಳಿತದಲ್ಲಿ ರಾಜ್ಯದಲ್ಲಿ ಗೂಂಡಾರಾಜ್ ಹಾಗೂ ಜಂಗಲ್ ರಾಜ್  ನಡೆಯುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಯೋಗಿ ಆಡಳಿತದಲ್ಲಿ ಕಾನೂನು ವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆಯೆಂದು ಸಮಾಜವಾದಿ ಪಕ್ಷವು ಕೂಡಾ ಟೀಕಿಸಿದೆ.

ಅತ್ಯಾಚಾರ ಮತ್ತು ಆ್ಯಸಿಡ್‌ ದಾಳಿ ಸಂತ್ರಸ್ತೆಯ ಮೇಲೆ  ಮತ್ತೆ ಆ್ಯಸಿಡ್‌ ದಾಳಿ ನಡೆಸಲಾದ ಅಮಾನವೀಯ ಘಟನೆ ಶನಿವಾರ ನಡೆದಿದ್ದು,  ಇದು ಆಕೆಯ ಮೇಲೆ ನಡೆದ ನಾಲ್ಕನೇ ಆ್ಯಸಿಡ್ ದಾಳಿಯಾಗಿದೆ.

Latest Videos
Follow Us:
Download App:
  • android
  • ios