ಮಾಜಿ ರಾಜ್ಯ ಮಾಹಿತಿ ಆಯುಕ್ತ ಶಂಕರ ಆರ್. ಪಾಟೀಲ್, ನಿವೃತ್ತ ಡಿವೈಎಸ್ಪಿ ಸೋಮಶೇಖರ ಛಬ್ಬಿ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ರಂಗಧಾಮಯ್ಯ ಮತ್ತು ಕೆಲವು ಕಿರುತೆರೆ ನಟಿಯರು ಮತ್ತು ವಕೀಲರು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು(ಅ. 01): ಮಹಾಲಕ್ಷ್ಮೀ ಲೇಔಟ್'ನ ಮಾಜಿ ಶಾಸಕ ಹಾಗೂ ಮಾಜಿ ಕಾಂಗ್ರೆಸ್ ಮುಖಂಡ ನೆ.ಲ. ನರೇಂದ್ರಬಾಬು ಇಂದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನರೇಂದ್ರಬಾಬು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ವಿಧಾನಸಭೆ ವಿಪಕ್ಷ ಉಪನಾಯಕ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ವೇಳೆ ಉಪಸ್ಥಿತರಿದ್ದರು. ಇದೇ ವೇಳೆ, ಮಾಜಿ ರಾಜ್ಯ ಮಾಹಿತಿ ಆಯುಕ್ತ ಶಂಕರ ಆರ್. ಪಾಟೀಲ್, ನಿವೃತ್ತ ಡಿವೈಎಸ್ಪಿ ಸೋಮಶೇಖರ ಛಬ್ಬಿ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ರಂಗಧಾಮಯ್ಯ ಮತ್ತು ಕೆಲವು ಕಿರುತೆರೆ ನಟಿಯರು ಮತ್ತು ವಕೀಲರು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.
