ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಹರಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಡಕ್ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು [ಜು.2] : ಲಿಂಗನಮಕ್ಕಿ ಜಲಾಶಯದಿಂದ ರಾಜಧಾನಿ ಬೆಂಗಳೂರಿಗೆ ನೀರು ತರುವ ಯೋಜನೆ ಜಾರಿಗೆ ಬಿಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ತರಲು ಮುಂದಾಗಿರುವ ಸರ್ಕಾರ ಕ್ರಮವು ಅವೈಜ್ಞಾನಿಕವಾದುದು. ಅದು ಕಾರ್ಯಸಾಧುವಲ್ಲ ಎಂದು ಹರಿಹಾಯ್ದರು. 

ಯಾವುದೇ ಕಾರಣಕ್ಕೂ ಈ ಯೋಜನೆ ಜಾರಿಯಾಗಲು ಅವಕಾಶ ನೀಡುವುದಿಲ್ಲ. ಈ ಯೋಜನೆಯ ಬದಲು ಪರ್ಯಾಯ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.