ಲೋಕಸಭಾ ಚುನಾವಣಾ ಕಾವಿನ ಬೆನ್ನಲ್ಲೇ ರಾಜ್ಯದಲ್ಲಿ ಮಳೆ ಸುರಿದು ಭುವಿಯನ್ನು ತಂಪಾಗಿಸಿದೆ. ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

 ಬೆಂಗಳೂರು : ತೀವ್ರ ಬಿಸಿಲಿನಿಂದ ಬಳಲಿದ ನಾಡಿಗೆ ವರುಣನ ಸಿಂಚನವಾಗಿದೆ. ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ತಂಪಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾವಿನಿಂದ ಕುದಿಯುತ್ತಿದ್ದ ಉದ್ಯಾನನಗರಿಯಲ್ಲಿಯೂ ಕೂಡ ಬುಧವಾರ ಮೊದಲ ಮಳೆಯ ಸಿಂಚನವಾಗಿದ್ದು, ಏಕಾಏಕಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. 

ಗುಡುಗು- ಮಿಂಚು ಸಹಿತ 73 ಮಿ.ಮೀ.ವರೆಗೆ ಸುರಿದ ಭಾರಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಗಾಳಿ-ಮಳೆಗೆ ನಗರದ ವಿವಿಧೆಡೆ ಹತ್ತಾರು ಮರಗಳು ಧರೆಗುರುಳಿವೆ. 

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ರಾಜ್ಯದ ಹಲವು ಪ್ರದೇಶದಲ್ಲಿ ಮಳೆಯಾಗಿದೆ. ಈ ಮಳೆಯು ಗುರುವಾರ ಮತ್ತು ಶುಕ್ರವಾರವೂ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆ ನಿರೀಕ್ಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.