ನೈಸ್ ಅಕ್ರಮಗಳ ಕುರಿತು ತನಿಖೆಗೆ ಕಾಗೋಡು ತಿಮ್ಮಪ್ಪ ನವರು ಸ್ಪೀಕರ್ ಆಗಿದ್ದಾಗ ಕಾನೂನು ಸಚಿವ ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ರಚಿಸಿದ್ದರು. ಆ ಸದನ ಸಮಿತಿ ಈಗಾಗಲೇ ವರದಿಯನ್ನು ಸಭಾಧ್ಯಕ್ಷರಿಗೆ ಸಲ್ಲಿಸಿದ್ದು, ವರದಿ ಮಂಡನೆಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಬೆಳಗಾವಿ (ನ.30): ನೈಸ್ ಅಕ್ರಮಗಳ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ಸದನ ಸಮಿತಿ ನೀಡಿರುವ ವರದಿ ಮಂಡಿಸಬೇಕೆಂದು ಒತ್ತಾಯಿಸಿ ಬಿಜೆಪಿಸದಸ್ಯರು ವಿಧಾನಸಭೆಯಲ್ಲಿಂದು ಸದನದ ಬಾವಿಗಿಳಿದು ಧರಣಿ ನಡೆಸಿದರು.

Add Asianetnews Kannada as a Preferred SourcegooglePreferred

ನೈಸ್ ಅಕ್ರಮಗಳ ಕುರಿತು ತನಿಖೆಗೆ ಕಾಗೋಡು ತಿಮ್ಮಪ್ಪ ನವರು ಸ್ಪೀಕರ್ ಆಗಿದ್ದಾಗ ಕಾನೂನು ಸಚಿವ ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ರಚಿಸಿದ್ದರು. ಆ ಸದನ ಸಮಿತಿ ಈಗಾಗಲೇ ವರದಿಯನ್ನು ಸಭಾಧ್ಯಕ್ಷರಿಗೆ ಸಲ್ಲಿಸಿದ್ದು, ವರದಿ ಮಂಡನೆಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಈ ಒತ್ತಾಯಕ್ಕೆ ದನಿಗೂಡಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರದಿ ಮಂಡನೆಗೆ ನಮ್ಮ ತಕರಾರಿಲ್ಲ ಅಂದಿದ್ದಾರೆ. ಮೊದಲು ಸದನ ಸಮಿತಿ ವರದಿ ಮಂಡಿಸಿ ಎಂದು ಧರಣಿ ನಿರತ ಬಿಜೆಪಿಸದಸ್ಯರು ಘೋಷಣೆ ಕೂಗಿದ್ದಾರೆ.

ಈ ವೇಳೆ ಸ್ಪೀಕರ್ 15 ನಿಮಿಷಗಳ ವರೆಗೆ ಸದನದ ಕಲಾಪ ಮುಂದೂಡಿದರು. ಮತ್ತೆ ಕಲಾಪ ಆರಂಭವಾದಾಗ ಮಾತನಾಡಿದ ಸಮಿತಿಯ ಅಧ್ಯಕ್ಷ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ನಾಳೆಯ ಒಳಗಾಗಿ ವರದಿಯ ಪ್ರತಿಗಳ ಮುದ್ರಿಸಿ ಮಂಡಿಸುವ ಭರವಸೆ ನೀಡಿದರು.