ನೀತಿ ಆಯೋಗದ ಉಪಾಧ್ಯಕ್ಷರಾಗಿರುವ ಅರವಿಂದ್ ಪನಗಾರಿಯಾ ಇಂದು ತಮ್ಮ  ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆ.31 ಕ್ಕೆ ಇವರ ಸೇವಾವಧಿ ಮುಕ್ತಾಯಗೊಳ್ಳಲಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಮರಳಲಿದ್ದಾರೆ.  

ನವದೆಹಲಿ (ಆ.01): ನೀತಿ ಆಯೋಗದ ಉಪಾಧ್ಯಕ್ಷರಾಗಿರುವ ಅರವಿಂದ್ ಪನಗಾರಿಯಾ ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆ.31 ಕ್ಕೆ ಇವರ ಸೇವಾವಧಿ ಮುಕ್ತಾಯಗೊಳ್ಳಲಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಮರಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅರವಿಂದ್ ಪನಗಾರಿಯಾ ನೀತಿ ಆಯೋಗದ ಮೊದಲ ಉಪಾಧ್ಯಕ್ಷರಾಗಿದ್ದರು. ಇಂಡೋ-ಅಮೇರಿಕಾ ಅರ್ಥಶಾಸ್ತ್ರಜ್ಞರು ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿಶ್ವಬ್ಯಾಂಕ್, ಐಎಂಎಫ್, ಏಷಿಯನ್ ಡೆವಲಪ್’ಮೆಂಟ್ ಬ್ಯಾಂಕ್’ಗಳಲ್ಲಿ ಉನ್ನತ ಹುದ್ದೆಯನ್ನು ನಿಭಾಯಿಸಿರುವ ಅಪಾರ ಅನುಭವ ಹೊಂದಿದ್ದಾರೆ.

ತಮ್ಮ ಕಾರ್ಯ ಸಾಧನೆಗಾಗಿ 2012 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದಿದ್ದಾರೆ.