ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧೆ ಮಾಡಲಾಗುವುದು. ತೆಲಂಗಾಣದಲ್ಲಿ ಟಿಆರ್ ಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 

ಹೈದರಾಬಾದ್: ತೆಲಂಗಾಣದಲ್ಲಿ ಟಿಆರ್‌ಎಸ್ ಜೊತೆ ಹೊಂದಾಣಿಕೆಯಿಲ್ಲ, ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ ಅಮಿತ್ ಶಾ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೆಹಬೂಬ್ ನಗರ ದಲ್ಲಿ ಸಾರ್ವಜನಿಕ ರ‌್ಯಾಲಿಯೊಂದರಲ್ಲಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಆಗಮಿಸಿದ್ದ ಶಾ ಪತ್ರಕರ್ತರ ಜೊತೆ ಮಾತನಾ ಡುತ್ತಾ ಈ ವಿಷಯ ತಿಳಿಸಿದರು. ‘ಟಿಆರ್‌ಎಸ್ ಜೊತೆ ನಾವು ಹೊಂದಾಣಿಕೆ ಮಾಡಿಕೊಳ್ಳು ತ್ತಿಲ್ಲ,’ ಎಂದರು ಶಾ. 

ಏಕಕಾಲದ ಚುನಾವ ಣೆಗೆ ಟಿಆರ್ ಎಸ್ ಮುಖ್ಯಸ್ಥ ಚಂದ್ರಶೇಖರ್ ರಾವ್ ಸಹಮತವಿದ್ದರು. ಆದರೆ, ಆ ನಂತರ ತಮ್ಮ ನಿಲುವು ಬದಲಾಯಿಸಿದ್ದಾರೆ. ಚುನಾ ವಣೆ 9 ತಿಂಗಳು ಮುಂಚಿತ ಮಾಡುವುದಕ್ಕೆ ಕಾರಣವೇನು? ಎಂದು ಅವರು ಪ್ರಶ್ನಿಸಿದರು.