Asianet Suvarna News Asianet Suvarna News

ಬಕ್ರೀದ್ : ಸಾರ್ವಜನಿಕವಾಗಿ ಪ್ರಾಣಿ ವಧೆ ಬ್ಯಾನ್

ಆಗಸ್ಟ್ 22 ರಂದು ಬಕ್ರೀದ್ ಹಬ್ಬ ಆಚರಣೆ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಪ್ರಾಣಿ ಹತ್ಯೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಆದೇಶ ಜಾರಿ ಮಾಡಿದ್ದಾರೆ.

No Animal Sacrifice In Public Says Yogi Adityanath Govt
Author
Bengaluru, First Published Aug 21, 2018, 12:24 PM IST | Last Updated Sep 9, 2018, 10:10 PM IST

ಲಕ್ನೋ :  ಆಗಸ್ಟ್ 22 ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಪ್ರಾಣಿಗಳ ಹತ್ಯೆ ಮಾಡಬಾರದು ಎಂದು ಯೋಗಿ ಆದಿತ್ಯನಾಥ್ ಸರ್ಕಾರ ಕಠಿಣ ಆದೇಶವೊಂದನ್ನು ಜಾರಿ ಮಾಡಿದೆ. 

ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶವನ್ನು ನೀಡಿದೆ. ಎಲ್ಲಿಯೂ ಕೂಡ ರಕ್ತದ ಕೋಡಿ ಹರಿಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. 

ವಿಡಿಯೋ ಕಾನ್ಫರೆನ್ಸ್ ಮಾಡುವ ಮೂಲಕ ಈ ಬಗ್ಗೆ ಯೋಗಿ ಸರ್ಕಾರ ಈ ಸೂಚನೆ ನೀಡಿದ್ದು, ಸಾರ್ವಜನಿಕವಾಗಿ ಪ್ರಾಣಿ ವಧೆ ಮಾಡುವುದು ಕೆಲ ಧರ್ಮಗಳ ನಂಬಿಕೆಗಳಿಗೆ ನೋವುಂಟು ಮಾಡಿದಂತಾಗುತ್ತದೆ. ಹಬ್ಬದ ಹೆಸರಿನಲ್ಲಿ ಪ್ರಾಣಿ ಹತ್ಯೆಯೂ ಕೂಡ ಸೂಕ್ತವಲ್ಲ ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿಗಳ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.  ಈ ಬಗ್ಗೆ ಅಧಿಕಾರಿಗಳೊಂದಿಗೂ ಕೂಡ ಸಭೆ ನಡೆಸಲಾಗಿದೆ ಎಂದು ಮುಜಾಫರ್ ನಗರ್ ಜಿಲ್ಲಾ ಮ್ಯಾಜಿಸ್ಟ್ರೇಟ್  ರಾಜೀವ್ ಶರ್ಮಾ ಹೇಳಿದ್ದಾರೆ. 

ಅಲ್ಲದೇ ಈ ರೀತಿ ಸಾರ್ವಜನಿಕವಾಗಿ ಪ್ರಾಣಿ ವಧೆ ಮಾಡುತ್ತಿರುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಕೂಡ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

Latest Videos
Follow Us:
Download App:
  • android
  • ios