ಮೈತ್ರಿ ಸರ್ಕಾರದ 12 ಅತೃಪ್ತ ಶಾಸಕರಿಂದ ರಾಜೀನಾಮೆ;  ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಶಾಸಕರ ನಡೆ 

ಹುಬ್ಬಳ್ಳಿ (ಜು.06): ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಬಸವರಾಜ್ ಹೊರಟ್ಟಿ ಹೇಳಿದರು.

Add Asianetnews Kannada as a Preferred SourcegooglePreferred

ಉಭಯಪಕ್ಷದ ಶಾಸಕರು ತಾವೇ ಕಚ್ಚಾಡಿಕೊಂಡು ರಾಜೀನಾಮೆ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇದಕ್ಕೆಲ್ಲ ಸಮನ್ವಯ ಸಮಿತಿ ತಪ್ಪುಗಳೇ ಕಾರಣ, ಎಂದು ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ | ರಾಜೀನಾಮೆ ನೀಡಲು ಬಂದ ಎರಡನೇ ಟೀಂ: ಆರ್. ಅಶೋಕ್ ಫುಲ್ ಆ್ಯಕ್ಟಿವ್!

ಯಾವೊಬ್ಬ ನಾಯಕರೂ ಜವಾಬ್ದಾರಿಯಿಂದ ಅತೃಪ್ತ ಶಾಸಕರ ಮನವೊಲಿಸಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೂ ಮರು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಎಲ್ಲಾ ಅತೃಪ್ತರನ್ನು ಮಂತ್ರಿ ಮಾಡಲು ಆಗಲ್ಲ. ಬಿಜೆಪಿಯವರು ಸರ್ಕಾರ ರಚನೆಗೆ ಮುಂದಾಗದೇ ಇರುವುದೇ ಒಳಿತು, ಎಂದು ಅವರು ಹೇಳಿದರು.