ನವದೆಹಲಿ (ಸೆ.20): ಕಾವೇರಿ ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಕರ್ನಾಟಕದ ವಾದಕ್ಕೆ ಮನ್ನಣೆ ನಿಡದೇ ದಿನಕ್ಕೆ 6 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ. ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಕರ್ನಾಟಕ ಸ್ತಿತಿಗತಿ, ವಿಸ್ತೃತ ವಿವರಣೆ. ಅಂಕಿ-ಅಂಶ ಸಮೇತ ಮಾಹಿತಿಯನ್ನು ನ್ಯಾಯಾಲಯದ ಮುಂದಿಟ್ಟರೂ ಅದನ್ನ ನ್ಯಾಯಾಲಯ ಪರಿಗಣಿಸಲಿಲ್ಲ. ತಾತ್ಕಾಲಿಕ ಆದೇಶ ನೀಡಬಾರದೆಂಬ ಮನವಿಗೂ ಕಿವಿಗೊಡಲಿಲ್ಲ. ಮುಂದಿನ ವಿಚಾರಣೆಯನ್ನು ಸೆ.28ಕ್ಕೆ ಮುಂದೂಡಿದೆ. ಸೆ.21 ರಿಂದ 27ರವರೆಗೆ 6 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಲಲಿತ್ ಉದಯ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಆದೇಶಿಸಿದೆ. ನಾಲ್ಕು ವಾರಗಳೊಳಗೆ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.