Asianet Suvarna News Asianet Suvarna News

ಬದಲಾಗುತ್ತಾ ಡಿ.ಕೆ ಶಿವಕುಮಾರ್ ಉಸ್ತುವಾರಿ..?

ನಮ್ಮಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಡಿ.ಕೆ ಶಿವಕುಮಾರ್ ಅವರನ್ನು ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆಯೂ ಕೂಡ ಯಾವುದೇ ರೀತಿಯ ಮಾತುಕತೆ ನಡೆದಿಲ್ಲ ಎಂದು ಶಾಸಕ ಆನಂದ್ ಸಿಂಗ್ ಹೇಳಿದ್ದಾರೆ. 

No Charges For Bellary In Charge Ministry
Author
Bengaluru, First Published Sep 14, 2018, 8:45 AM IST

ಬಳ್ಳಾರಿ : ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಅವರ ಬದಲಾವಣೆಯ ವಿಚಾರವಾಗಿ ಇದೀಗ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. 

ನಮ್ಮಲ್ಲಿ ಯಾವುದೇ ರೀತಿಯಾದ ಭಿನ್ನಾಭಿಪ್ರಾಯಗಳೂ ಕೂಡ ಇಲ್ಲ. ಇಲ್ಲಿನ ಶಾಸಕರೆಲ್ಲರೂ ಕೂಡ ಶಿವಕುಮಾರ್ ಅವರನ್ನು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಸ್ವಾಗತಿಸಿದ್ದೇವೆ.  ನಮ್ಮಲ್ಲಿ ಉಸ್ತುವಾರಿ ಬಗ್ಗೆ ಯಾವುದೇ ರೀತಿಯಾದ ಗೊಂದಲವಿಲ್ಲ.  ಈ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸಿದೆ. ಆದರೆ ನಾವು ಈ ಬಗ್ಗೆ ಎಲ್ಲಿಯೂ ಕೂಡ ಮಾತನಾಡಿಲ್ಲ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ನ 6 ಮಂದಿ ಶಾಸಕರಿದ್ದು,  ಯಾರಿಗೆ ಸ್ಥಾನಮಾನ ಕೊಡಬೇಕು ಎನ್ನುವುದನ್ನು ಪಕ್ಷ ನಿರ್ಧಾರ ಮಾಡುತ್ತದೆ. ಈ ರೀತಿ ಗೊಂದಲ ಉಂಟು ಮಾಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. 

Follow Us:
Download App:
  • android
  • ios