ಸಿಬಿಎಸ್ಇ ಫಲಿತಾಂಶ ವಿಳಂಬ ಇಲ್ಲ, ಆತಂಕ ಬೇಡ: ಜಾವಡೇಕರ್
ಅಂಕಗಳ ನೀತಿಯ ಬಗ್ಗೆ ಸುಪ್ರೀಂ ಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಬಹುದು ಎಂಬ ಆತಂಕವಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿ: ಸಿಬಿಎಸ್ಇಯ 12ನೇ ತರಗತಿಯ ಫಲಿತಾಂಶ ಪ್ರಕಟಕ್ಕೆ ವಿಳಂಬ ಮಾಡುವುದಿಲ್ಲ, ಶೀಘ್ರ ಅದನ್ನು ಪ್ರಕಟಿಸಲಾಗುತ್ತದೆ.
ಈ ಬಗ್ಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಅಂಕಗಳ ನೀತಿಯ ಬಗ್ಗೆ ಸುಪ್ರೀಂ ಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಬಹುದು ಎಂಬ ಆತಂಕವಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಕೃಪಾಂಕಕ್ಕೆ ಸಂಬಂಧಿಸಿದ ಹಿತಕಾರಿ ನೀತಿಯನ್ನು ರದ್ದುಪಡಿಸದಂತೆ ಸಿಬಿಎಸ್ಇಗೆ ದೆಹಲಿ ಹೈಕೋರ್ಟ್ ಆದೇಶಿಸಿತ್ತು.