ಸಮಾಜವಾದಿ ಪಕ್ಷವು ಯಾವುದೇ ರೀತಿಯ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿರುವ ಮುಲಾಯಮ್, ಇತರ ಪಕ್ಷಗಳು ಬಯಸಿದ್ದಲ್ಲಿ ಸಮಾಜವಾದಿ ಪಕ್ಷದೊಂದಿಗೆ ವಿಲೀನವಾಗಬಹುದು ಎಂದು ಅವರು ಹೇಳಿದ್ದಾರೆ.

ಲಕ್ನೋ (ನ.10): ಮುಂಬರುವ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷವು ಯಾವುದೇ ‘ಮಹಾಮೈತ್ರಿ’ ಮಾಡಿಕೊಳ್ಳುವುದಿಲ್ಲವೆಂದು ಪಕ್ಷದ ವರಿಷ್ಠ ಮುಲಾಯಮ್ ಸಿಂಗ್ ಯಾದವ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಸಮಾಜವಾದಿ ಪಕ್ಷವು ಏಕಾಂಗಿಯಾಗಿ ಮುಂಬರುವ ಚುನಾವಣೆಯನ್ನು ಎದುರಿಸಲಿದೆ, ಸಮಾಜವಾದಿ ಪಕ್ಷವು ಯಾವುದೇ ರೀತಿಯ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿರುವ ಮುಲಾಯಮ್, ಇತರ ಪಕ್ಷಗಳು ಬಯಸಿದ್ದಲ್ಲಿ ಸಮಾಜವಾದಿ ಪಕ್ಷದೊಂದಿಗೆ ವಿಲೀನವಾಗಬಹುದು ಎಂದು ಅವರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಲಕ್ನೋನಲ್ಲಿ ನಡೆದ ಸಮಾಜವಾದಿ ಪಕ್ಷದ ರಜತ ಮಹೋತ್ಸವದಲ್ಲಿ ಆರ್’ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್, ಜೆಡಿಯು ಮುಖಂಡ ಶರದ್ ಯಾದವ ಹಾಗೂ ಇನ್ನಿತರ ಪಕ್ಷಗಳ ನಾಯಕರ ಭಾಗವಹಿಸುವಿಕೆಯು, ಬಿಹಾರ ಮಾದರಿಯ ಮಹಾಮೈತ್ರಿ ರಚನೆಯಾಗುವ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.