2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾದಂತೆ ಕಂಡು ಬರುತ್ತಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳು ಮಹತ್ವದ ಒಮ್ಮತವೊಂದಕ್ಕೆ ಬಂದಿವೆ. ಉಭಯ ಪಕ್ಷಗಳಅತೃಪ್ತ ನಾಯಕರನ್ನು ಪರಸ್ಪರ ಸೆಳೆದುಕೊಳ್ಳದಿರಲು ಅವು ನಿರ್ಧರಿಸಿವೆ.  

ಲಖನೌ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾದಂತೆ ಕಂಡು ಬರುತ್ತಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳು ಮಹತ್ವದ ಒಮ್ಮತವೊಂದಕ್ಕೆ ಬಂದಿವೆ. ಉಭಯ ಪಕ್ಷಗಳ ಅತೃಪ್ತ ನಾಯಕರನ್ನು ಪರಸ್ಪರ ಸೆಳೆದುಕೊಳ್ಳದಿರಲು ಅವು ನಿರ್ಧರಿಸಿವೆ. 

Add Asianetnews Kannada as a Preferred SourcegooglePreferred

ಬಿಎಸ್ ಪಿ ಯಾವುದೇ ವ್ಯಕ್ತಿ ಬಂಡೆದ್ದರೆ ಅವರನ್ನು ಸಮಾಜವಾದಿ ಪಕ್ಷಕ್ಕೆ ಸೇರಿಸಿಕೊಳ್ಳ ಬಾರದು. ಅದೇ ರೀತಿ ಸಮಾಜವಾದಿ ಪಕ್ಷದಿಂದ ಬಂಡೆದ್ದರೆ ಅವರನ್ನು ಬಿಎಸ್‌ಪಿಗೆ ಸೇರಿಸಿಕೊಳ್ಳಬಾರದು. ವಿಶ್ವಾಸವೃದ್ಧಿಗಾಗಿ ಈ ಕ್ರಮಕ್ಕೆ ಕೈಹಾಕಬೇಕು ಎಂದು ಉಭಯ ಪಕ್ಷಗಳು ನಿರ್ಧರಿಸಿವೆ. 

ಇದರ ಬೆನ್ನಲ್ಲೇ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರರ ಪಕ್ಷಕ್ಕೆ ಪಕ್ಷಾಂತರ ನಿಲ್ಲಿಸಿದ್ದಾರೆ ಎಂದು ಸಮಾಜವಾದಿ ಪಾರ್ಟಿ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ. 2019 ರಲ್ಲಿ ಬಿಜೆಪಿ ಮಣಿಸಲು ಮೈತ್ರಿ ಅನಿವಾರ್ಯ ಎಂದು ಬಿಎಸ್‌ಪಿ-ಎಸ್ಪಿ ಮನಗಂಡಿವೆ. ಅದಕ್ಕೆಂದೇ ಅವು ವಿಶ್ವಾಸವೃದ್ಧಿ ಕ್ರಮಕ್ಕೆ ಮುಂದಾಗಿವೆ. ಇತ್ತೀಚಿನ ಫೂಲ್‌ಪುರ, ಗೋರಖಪುರ ಹಾಗೂ ಕೈರಾನಾ ಲೋಕಸಭಾ ಉಪಚುನಾವಣೆಗಳಲ್ಲಿ ಎಸ್‌ಪಿ-ಬಿಎಸ್‌ಪಿ ಹಾಗೂ ಆರ್‌ಎಲ್‌ಡಿ ಮೈತ್ರಿಕೂಟ ಜಯಿಸಿದೆ.