Asianet Suvarna News Asianet Suvarna News

ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್‌ ಮನೆಯ ಒಂದು ನಾಯಿಯೂ ಸತ್ತಿಲ್ಲ: ಖರ್ಗೆ

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಿಸಿದ್ದು, ಸ್ವಾಸಂತ್ರ್ಯ ಸಂಗ್ರಾಮದಲ್ಲಿ ಸಂಘ ಹಾಗೂ ಬಿಜೆಪಿ ಮುಖಂಡರ ಮನೆಯ ನಾಯಿಯೂ ಸತ್ತಿಲ್ಲವೆಂದು ಆರೋಪಿಸಿದ್ದಾರೆ.

Not even dog died of RSS leader in freedom fight says Mallikarjuna Kharge
Author
Bengaluru, First Published Oct 5, 2018, 11:47 AM IST

ಫೈಜ್‌ಪುರ (ಮಹಾರಾಷ್ಟ್ರ): ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ’ ಎಂಬ ವಿವಾದಿತ ಹೇಳಿಕೆಯನ್ನು ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಪುನರುಚ್ಚರಿಸಿದ್ದಾರೆ.

"

ಗುರುವಾರ ಕಾಂಗ್ರೆಸ್‌ ಜನಸಂಘರ್ಷ ಯಾತ್ರೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ಸಿಗರು ದೇಶಕ್ಕೆ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ ಬಿಜೆಪಿ, ಆರೆಸ್ಸೆಸ್‌ ಮನೆಗಳ ಒಂದು ನಾಯಿಯಾದರೂ ಸ್ವಾತಂತ್ರ್ಯಕ್ಕಾಗಿ ಸತ್ತಿದೆಯೇ?’ ಎಂದು ಪ್ರಶ್ನಿಸಿದರು.

8 ತಿಂಗಳ ಹಿಂದೆ ಖರ್ಗೆ ಇದೇ ಮಾತನ್ನು ಲೋಕಸಭೆಯಲ್ಲಿ ಆಡಿದ್ದಾಗ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಮುಖಂಡರ ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋದ ವ್ಯಕ್ತವಾಗಿದೆ.

 

 

Follow Us:
Download App:
  • android
  • ios