ಜಯಲಲಿತಾ ನಿಧನದ ಬಳಿಕ ಐಎಐಡಿಎಂಕೆ ಮೇಲೆ ಹಿಡಿತ ಸಾಧಿಸಿ, ಮುಖ್ಯಮಂತ್ರಿ ಗಾದಿಯೇರಲು ಸಜ್ಜಾಗಿರುವ ಶಶಿಕಲಾಗೆ ಈಗ ಕಾನೂನು ಸಂಕಷ್ಟದ ಭೀತಿ ಎದುರಿಸುತ್ತಿದ್ದಾರೆ. ಶಶಿಕಲಾ ಪ್ರಮಾಣಕ್ಕೂ ಮುನ್ನ ಅವರ ವಿರುದ್ಧದ ಆರೋಪ ಹಾಗೂ ಭ್ರಷ್ಟಾಚಾರ ಪ್ರಕರಣದ ತೀರ್ಪಿನ ಪರಿಣಾಮ ಕುರಿತು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ದೆಹಲಿಗೆ ತೆರಳಿದ್ದ ತಮಿಳುನಾಡು ರಾಜ್ಯಪಾಲ ವಿದ್ಯಾ ಸಾಗರ ರಾವ್, ಚೆನ್ನೈಗೆ ಹಿಂದಿರುಗದೇ ತಡರಾತ್ರಿ ಮುಂಬೈಗೆ ತೆರಳಿರುವುದು ಅಚ್ಚರಿ ಮೂಡಿಸಿದೆ. ರಾಜ್ಯಪಾಲರ ಈ ನಡೆಯಿಂದಾಗಿ ಮಂಗಳವಾರ ಶಶಿಕಲಾ ಪ್ರಮಾಣವಚನ ನಡೆಯುವುದೇ ಅನುಮಾನವಾಗಿದೆ.

ಬೆಂಗಳೂರು(ಫೆ.07): ಜಯಲಲಿತಾ ನಿಧನದ ಬಳಿಕ ಐಎಐಡಿಎಂಕೆ ಮೇಲೆ ಹಿಡಿತ ಸಾಧಿಸಿ, ಮುಖ್ಯಮಂತ್ರಿ ಗಾದಿಯೇರಲು ಸಜ್ಜಾಗಿರುವ ಶಶಿಕಲಾಗೆ ಈಗ ಕಾನೂನು ಸಂಕಷ್ಟದ ಭೀತಿ ಎದುರಿಸುತ್ತಿದ್ದಾರೆ. ಶಶಿಕಲಾ ಪ್ರಮಾಣಕ್ಕೂ ಮುನ್ನ ಅವರ ವಿರುದ್ಧದ ಆರೋಪ ಹಾಗೂ ಭ್ರಷ್ಟಾಚಾರ ಪ್ರಕರಣದ ತೀರ್ಪಿನ ಪರಿಣಾಮ ಕುರಿತು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ದೆಹಲಿಗೆ ತೆರಳಿದ್ದ ತಮಿಳುನಾಡು ರಾಜ್ಯಪಾಲ ವಿದ್ಯಾ ಸಾಗರ ರಾವ್, ಚೆನ್ನೈಗೆ ಹಿಂದಿರುಗದೇ ತಡರಾತ್ರಿ ಮುಂಬೈಗೆ ತೆರಳಿರುವುದು ಅಚ್ಚರಿ ಮೂಡಿಸಿದೆ. ರಾಜ್ಯಪಾಲರ ಈ ನಡೆಯಿಂದಾಗಿ ಮಂಗಳವಾರ ಶಶಿಕಲಾ ಪ್ರಮಾಣವಚನ ನಡೆಯುವುದೇ ಅನುಮಾನವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದೆಡೆ ಶಶಿಕಲಾ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದರೆ, ಮತ್ತೊಂದೆಡೆ ಸುಪ್ರೀಂಕೋರ್ಟ್​ನಲ್ಲಿ ಶಶಿಕಲಾ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅಕ್ರಮ ಆಸ್ತಿ ಪ್ರಕರಣದ ಅಂತಿಮ ತೀರ್ಪು ಹೊರಬರುವ ವರೆಗೂ ಶಶಿಕಲಾ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಬಾರದು ಎಂದು ತಮಿಳುನಾಡಿನ ಸಂಘಟನೆಯೊಂದು ಸುಪ್ರೀಂಗೆ ಮನವಿ ಮಾಡಿದೆ. ಆ ಪಿಐಎಲ್​​ ವಿಚಾರಣೆ ಇಂದು ನಡೆಯುವ ಸಾಧ್ಯತೆ ಇದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತು ಇದೇ ವಾರ ಸುಪ್ರೀಂಕೋರ್ಟ್ ತೀರ್ಪು ನೀಡುವುದಾಗಿ ಹೇಳಿದೆ. ಇದು ಶಶಿಕಲಾರ ರಾಜಕೀಯ ಭವಿಷ್ಯ ನಿರ್ಧರಿಸಲಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಜಯಲಲಿತಾ ಪ್ರಮುಖ ಆರೋಪಿಯಾಗಿದ್ದರು. ಅವರ ಆಪ್ತೆ ಶಶಿಕಲಾ ವಿರುದ್ಧ ಭ್ರಷ್ಟಾಚಾರಕ್ಕೆ ನೆರವು ನೀಡಿದ ಆರೋಪ ಹೊರಿಸಲಾಗಿತ್ತು. ಪ್ರಮುಖ ಆರೋಪಿ ಜಯಲಿಲತಾ ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ಇತರ ಆರೋಪಿಗಳ ವಿರುದ್ಧ ಪ್ರಕರಣ ಮುಂದುವರಿಯಲಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಯ ವಿಚಾರಣೆ ಪೂರ್ಣ ಗೊಳಿಸಿರುವ ಸುಪ್ರೀಂಕೋರ್ಟ್, ಒಂದು ವಾರದಲ್ಲಿ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.