ಮೈಸೂರಿನಲ್ಲಿ ನಡೆದ ಎಸಿಬಿ ದಾಳಿಯಲ್ಲಿ ಭರ್ಜರಿ ತಿಮಿಂಗಲವೊಂದು ಸಿಕ್ಕಿಬಿದ್ದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್​ ಇಂಜಿನಿಯರ್​ ಬಲೆಗೆ ಬಿದ್ದಿದ್ದು, ಅಕ್ರಮ ಆಸ್ತಿ ಸಂಪಾದನೆ ಬೆತ್ತಲಾಗಿದೆ. ಆಯಕಟ್ಟಿನ ಸ್ಥಳದಲ್ಲಿ ಕೂತು ಹೆಗ್ಗಣದಂತೆ ತಿಂದು ತೇಗಿದ್ದ ಆಸಾಮಿ, ಇರೋದನ್ನೆಲ್ಲ ಅಧಿಕಾರಿಗಳ ಮುಂದೆ ಹೊರ ಹಾಕಿದ್ದಾನೆ. ಅಚ್ಚರಿ ಅಂತಂದ್ರೆ.. ದಿನಪೂರ್ತಿ ಎಣಿಸಿದರೂ ಭ್ರಷ್ಟನ ಲೆಕ್ಕ ಚುಕ್ತಾ ಆಗುತ್ತಿಲ್ಲ.

ಮೈಸೂರು(ಡಿ.07): ಮೈಸೂರಿನಲ್ಲಿ ನಡೆದ ಎಸಿಬಿ ದಾಳಿಯಲ್ಲಿ ಭರ್ಜರಿ ತಿಮಿಂಗಲವೊಂದು ಸಿಕ್ಕಿಬಿದ್ದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್​ ಇಂಜಿನಿಯರ್​ ಬಲೆಗೆ ಬಿದ್ದಿದ್ದು, ಅಕ್ರಮ ಆಸ್ತಿ ಸಂಪಾದನೆ ಬೆತ್ತಲಾಗಿದೆ. ಆಯಕಟ್ಟಿನ ಸ್ಥಳದಲ್ಲಿ ಕೂತು ಹೆಗ್ಗಣದಂತೆ ತಿಂದು ತೇಗಿದ್ದ ಆಸಾಮಿ, ಇರೋದನ್ನೆಲ್ಲ ಅಧಿಕಾರಿಗಳ ಮುಂದೆ ಹೊರ ಹಾಕಿದ್ದಾನೆ. ಅಚ್ಚರಿ ಅಂತಂದ್ರೆ.. ದಿನಪೂರ್ತಿ ಎಣಿಸಿದರೂ ಭ್ರಷ್ಟನ ಲೆಕ್ಕ ಚುಕ್ತಾ ಆಗುತ್ತಿಲ್ಲ.

Add Asianetnews Kannada as a Preferred SourcegooglePreferred

ಮಹೇಶ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಸಿಸ್ಟೆಂಟ್​ ಇಂಜಿನಿಯರ್. ಸದ್ಯ ಮಹೇಶ್​​ ಎಸಿಬಿ ಬಲೆಗೆ ಬಿದ್ದಿದ್ದಾನೆ. ವಿಜಯನಗರದ ನಿವಾಸದ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ಅಕ್ರಮ ಆಸ್ತಿಯ ದಾಖಲೆ ಹಾಗೂ ಚಿನ್ನಾಭರಣಗಳನ್ನ ವಶಕ್ಕೆ ತೆಗೊಂಡಿದ್ದಾರೆ.

1 ಕೆಜಿ ಚಿನ್ನ, 3 ಕಾರು, 23 ಲಕ್ಸುರಿ ವಾಚ್​​!

ಮಹೇಶ್​ ಮನೆ ತಪಾಸಣೆ ವೇಳೆ 1 ಕೆಜಿ ಚಿನ್ನ, 3 ಐಷಾರಾಮಿ ಕಾರು, 50 ಸಾವಿರ ನಗದು ಹಾಗೂ 23 ಲಕ್ಸುರಿ ವಾಚ್​ಗಳು ಸಿಕ್ಕಿವೆ. ಮನೆಯನ್ನೇ ಮಿನಿ ಬಾರ್ ಮಾಡಿಕೊಂಡಿರೋ ಆಸಾಮಿ ಈತ. ಸುಮಾರು 12 ಲಕ್ಷ ಕರ್ಚು ಮಾಡಿ ತಾನು ಮತ್ತು ಮಗಳು ಗಾಲ್ಫ್​ ಕ್ಲಬ್​ನ ಸದಸ್ಯತ್ವ ಪಡೆದುಕೊಂಡು ವಿಲಾಸಿ ಜೀವನ ನಡೆಸುತ್ತಿದ್ದ.

ಕೋಟಿ ಮೀರುವ ಬಂಗಲೆ, ಮುಗಿಯದ ಲೆಕ್ಕ!

ಇಷ್ಟೇ ಅಲ್ಲ ಮೂಡಾದ ಭ್ರಷ್ಟ ಅಧಿಕಾರಿ ಮಹೇಶ ಜೆಪಿ ನಗರದಲ್ಲಿ ಒಂದು ಪ್ಲಾಟ್​, ದಟ್ಟಕಳ್ಳಿಯಲ್ಲಿ ಕಮರ್ಷಿಯಲ್​ ಕಾಂಪ್ಲೆಕ್ಸ್​ ಸಂಪಾದಿಸಿದ್ದಾನೆ. ಒಂದು ಕೋಟಿ ರುಪಾಯಿ ಮೀರುವ ಬಂಗಲೆಯನ್ನೂ ಕಟ್ಟಿಸಿದ್ದಾನೆ. ಎರಡು ಲಾಕರ್​ಗಳನ್ನ ವಶಕ್ಕೆ ಪಡೆದಿರೋ ಎಸಿಬಿ ಅಧಿಕಾರಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಶುರುವಾದ ಲೆಕ್ಕಾಚಾರ ಮಧ್ಯರಾತ್ರಿ ಆದರೂ ಮುಗಿದಿಲ್ಲ.

ಮುಡಾದ ಆಯಕಟ್ಟಿನ ಹುದ್ದೆಯಲ್ಲಿ ಕೂತಿರೋ ಆಸಾಮಿ ವರ್ಷಗಳಿಂದ ಸಾಕಷ್ಟು ಅಕ್ರಮ ಆಸ್ತಿಯನ್ನೇ ಸಂಪಾದನೆ ಮಾಡಿದ್ದಾನೆ. ಆರಂಭದಲ್ಲಿ 18 ಸಾವಿರ ಸಂಬಳಕ್ಕೆ ಸೇರಿದವನಿಗೆ ಈಗ ಪಡೀತಿರೋದು 30 ಸಾವ್ರ ಸಂಬಳ. ಆದರೆ ಈತನ ಆಸ್ತಿ ಲೆಕ್ಕ ಮಾತ್ರ 20 ಕೋಟಿಯನ್ನೂ ಮೀರುತ್ತಿದ್ದು, ಇಷ್ಟು ಆಸ್ತಿ ಹೇಗೆ ಸಂಪಾದನೆ ಮಾಡಿದ ಅನ್ನೋದು ಜಗತ್ತಿಗೆ ಗೊತ್ತಾಗಬೇಕಿದೆ.