ಹುಬ್ಬಳಿಯಲ್ಲಿ ಪಾಲಿಕೆ ಅಧಿಕಾರಿಗಳಿಂದ ಆಪರೇಶನ್ ಫುಟ್’ಪಾತ್
ನಗರದ ಸುಭಾಷ್ ರಸ್ತೆ ಹಾಗೂ ನೆಹರೂ ಮಾರುಕಟ್ಟೆಯಲ್ಲಿ ರಸ್ತೆ ಮೇಲೆ ತಲೆ ಎತ್ತಿದ್ದ ನೂರಾರು ಹೂವು, ಹಣ್ಣಿನ ಅಂಗಡಿಗಳನ್ನು ಪಾಲಿಕೆ ಸಿಬ್ಬಂದಿ ಟ್ರ್ಯಾಕ್ಟರ್ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.
ಹುಬ್ಬಳ್ಳಿ (ಏ.08): ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಇಂದು ಬೆಳ್ಳಂಬೆಳಗ್ಗೆ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.
ನಗರದ ಸುಭಾಷ್ ರಸ್ತೆ ಹಾಗೂ ನೆಹರೂ ಮಾರುಕಟ್ಟೆಯಲ್ಲಿ ರಸ್ತೆ ಮೇಲೆ ತಲೆ ಎತ್ತಿದ್ದ ನೂರಾರು ಹೂವು, ಹಣ್ಣಿನ ಅಂಗಡಿಗಳನ್ನು ಪಾಲಿಕೆ ಸಿಬ್ಬಂದಿ ಟ್ರ್ಯಾಕ್ಟರ್ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೀದಿಬದಿ ವ್ಯಾಪಾರಸ್ಥರು ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದ್ದು, ಯಾವುದೇ ಕಾರಣಕ್ಕೂ ಅಂಗಡಿಗಳನ್ನು ತೆರವುಗೊಳಿಸಬಾರದು ಎಂದು ಪಟ್ಟು ಹಿಡಿದರು. ಮಧ್ಯಪ್ರವೇಶಿಸಿದ ಮಹಾನಗರ ಪೊಲೀಸರು ವ್ಯಾಪಾರಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು.
ಬಳಿಕ ರಸ್ತೆ ಬದಿಯಲ್ಲಿದ್ದ ಅಂಗಡಿಗಳಲ್ಲಿನ ಸರಕು, ಸರಂಜಾಮು ಸಮೇತ ಎಲ್ಲವನ್ನು ಎತ್ತಂಗಡಿ ಮಾಡಲಾಯಿತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಮುಂಜಾಗ್ರತ ಕ್ರಮವಾಗಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು. ಕೆಲವು ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ತೆರವುಗೊಳಿಸಿಕೊಂಡರೆ ಕೆಲವರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಪಾಲಿಕೆ ಸ್ಥಳಕ್ಕೆ ಎರಡು ಜೆಸಿಬಿಗಳನ್ನು ಕರೆ ತಂದು ತೆರವು ಕಾರ್ಯಗೊಳಿಸಿದರು.