ಬಹ್ರೇನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಮನಾಮಾ (ಜ.09): ಬಹ್ರೇನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮವಾರ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮೋದಿ ಸರ್ಕಾರ ಜನರಿಗೆ ಉದ್ಯೋಗ ಒದಗಿಸುವಲ್ಲಿ ವಿಫಲವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉದ್ಯೋಗ ಸೃಷ್ಟಿ 8 ವರ್ಷದ ಕನಿಷ್ಠಕ್ಕೆ ಕುಸಿದಿದೆ. ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಚೀನಾ 2 ದಿನದಲ್ಲಿ ಸಾಧಿಸಿದ್ದನ್ನು ಭಾರತ 1 ವರ್ಷದಲ್ಲಿ ಸಾಧಿಸುತ್ತಿದೆ’ ಎಂದು ಟೀಕಿಸಿದರು. ‘ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದ್ದು, ಕೊಲೆಗಳು ನಡೆಯುತ್ತಿವೆ.

ಪತ್ರಕರ್ತರ ಹತ್ಯೆಗಳು ಸಂಭವಿಸುತ್ತಿವೆ. ಆಹಾರ ಸೇವನೆಗೂ ಸ್ವಾತಂತ್ರ್ಯ ಇಲ್ಲ’ ಎಂದರು. ‘ಇಷ್ಟೆಲ್ಲ ಆದರೂ ಪ್ರಧಾನಿ ಮಾತನಾಡುತ್ತಿಲ್ಲ. ನಮಗೆ ಮೌನ ಬೇಕಿಲ್ಲ. 2019ಕ್ಕೆ ಬಿಜೆಪಿಯನ್ನು ಸೋಲಿಸಲಿದ್ದೇವೆ’ ಎಂದು ಗುಡುಗಿದರು.