ದಲಿತರನ್ನು ಒಳಗೊಂಡ ಬ್ರಿಟಿಷ್‌ ಸೇನೆಯು ಮೇಲ್ಜಾತಿಯವರನ್ನು ಒಳಗೊಂಡ ಪೇಶ್ವೆ ಸೇನೆಯನ್ನು ಸೋಲಿಸಿದ್ದ ಸ್ಮರಣಾರ್ಥ ವಿಜಯೋತ್ಸವ ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ಜಾತಿ ಹಿಂಸಾಚಾರ ಮುಂದುವರೆದಿದ್ದು ಉದ್ವಿಘ್ನ ಪರಿಸ್ಥಿತಿ

ಪುಣೆ: ಪುಣೆಯ ಭೀಮಾ ಕೋರೆಗಾಂವ್​ನಲ್ಲಿ ಜಾತಿ ಹಿಂಸಾಚಾರ ಮುಂದುವರೆದಿದ್ದು ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಕಲ್ಲುತೂರಾಟದಲ್ಲಿ ಓರ್ವ ಬಲಿಯಾಗಿದ್ದಾನೆ.

Add Asianetnews Kannada as a Preferred SourcegooglePreferred

ಭೀಮಾ ಕೋರೆಗಾಂವ್‌ ಯುದ್ಧದಲ್ಲಿ ದಲಿತರನ್ನು ಒಳಗೊಂಡ ಬ್ರಿಟಿಷ್‌ ಸೇನೆಯು ಮೇಲ್ಜಾತಿಯವರನ್ನು ಒಳಗೊಂಡ ಪೇಶ್ವೆ ಸೇನೆಯನ್ನು ಸೋಲಿಸಿದ್ದ ಸ್ಮರಣಾರ್ಥ ವಿಜಯೋತ್ಸವ ಆಯೋಜಿಸಲಾಗಿತ್ತು.

200ನೇ ವರ್ಷದ ವಿಜಯೋತ್ಸವ ಅಂಗವಾಗಿ ನಿನ್ನೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮಾತಿನ ಚಕಮಕಿ ತಾರಕಕ್ಕೇರಿದ್ದು ಕಲ್ಲು ತೂರಾಟ ನಡೆದಿದೆ. ಬೆಂಕಿ ಹಚ್ಚಿ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಮನೆ, ವಾಹನಗಳನ್ನು ಧ್ವಂಸ ಮಾಡಿದ್ದಾರೆ. 144 ಸೆಕ್ಷನ್​ ಜಾರಿಯಿದ್ದರೂ ಇಂದೂ ಕೂಡಾ ಪ್ರತಿಭಟನೆ ಮುಂದುವರೆದಿದೆ. ಕೊರೆಗಾಂವ್‌ ಪಟ್ಟಣ ಮತ್ತೆ ಉದ್ವಿಗ್ನಗೊಂಡಿದೆ.

ಪರಿಸ್ಥಿತಿಯು ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೆಳಿದ್ದಾರೆ.

1 ಜನವರಿ 1818ರಂದು ಭೀಮಾ ಕೋರೆಗಾಂವ್ ನಡೆದ ಕದನವು ಮೇಲ್ಜಾತಿಯವರ ವಿರುದ್ಧ ದಲಿತ-ಶೋಷಿತರ ವಿಜಯವಾಗಿತ್ತು ಎಂದು ದಲಿತ ಮುಖಂಡ ಹಾಗೂ ಚಿಂತಕರು ಅಭಿಪ್ರಾಯಪಡುತ್ತಾರೆ.