ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ಗೆ ಆಹ್ವಾನ ನೀಡಿದ್ದಾರೆ.

ತುಮಕೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ಗೆ ಆಹ್ವಾನ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಎಷ್ಟು ಬೇಗ ಪರಮೇಶ್ವರ್ ಕಾಂಗ್ರೆಸ್ ಬಿಡುತ್ತಾರೋ ಅಷ್ಟು ಬೇಗ ಅವರ ಭವಿಷ್ಯ ಉಜ್ವಲವಾಗಲಿದೆ. ಎಂದು ಹೇಳಿದ್ದಾರೆ.

ಕಳೆದ ಬಾರಿ ಕೊರಟಗೆರೆಯಲ್ಲಿ ಸೋಲಿಸಿದಂತೆ ಈ ಬಾರಿಯೂ ಪರಮೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷದವರೇ ಸೋಲಿಸಲಿದ್ದಾರೆ. ಪರಮೇಶ್ವರ್ ಅವರನ್ನು ಕಾಂಗ್ರೆಸ್ ಮೂಲೆಗುಂಪು ಮಾಡಲಿದ್ದು, ಅವರು ಬಿಜೆಪಿಗೆ ಬಂದರೆ ಉತ್ತಮ ಸ್ಥಾನ ಸಿಗಲಿದೆ’ ಎಂದರು.