ಪಾಕಿಸ್ತಾನ ಅಧಿಕಾರಿಗಳು ಚಂದು ಚವಾಣ್ ಜೀವಂತವಾಗಿರುವುದನ್ನು ಖಚಿತಪಡಿಸಿದ್ದಾರೆ. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ನೆರೆಯ ದೇಶದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಂಬೈ(ಜ.12): ಕಳೆದ ವರ್ಷದ ಸೆ.30ರಂದು ಆಕಸ್ಮಿಕವಾಗಿ ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಪಾಕಿಸ್ತಾನ ಸೈನಿಕರ ವಶದಲ್ಲಿರುವ ಸೈನಿಕ ಚಂದು ಚವಾಣ್ ಶೀಘ್ರ ಬಿಡುಗಡೆಯಾಗಲಿದ್ದಾರೆ. ಈ ಬಗ್ಗೆ ಖಚಿತ ದಿನವನ್ನು ಇಷ್ಟರಲ್ಲೇ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಖಾತೆ ಸಹಾಯಕ ಸಚಿವ ಸುಭಾಷ್ ಭಾಮ್ರೆ ಹೇಳಿದ್ದಾರೆ.
ಪಾಕಿಸ್ತಾನ ಅಧಿಕಾರಿಗಳು ಚಂದು ಚವಾಣ್ ಜೀವಂತವಾಗಿರುವುದನ್ನು ಖಚಿತಪಡಿಸಿದ್ದಾರೆ. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ನೆರೆಯ ದೇಶದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಮಟ್ಟದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಕೊನೆಯ ಮಾತುಕತೆ ನಡೆದಿತ್ತು ಎಂದು ಭಾಮ್ರೆ ತಿಳಿಸಿದ್ದಾರೆ.
