ಭಾರತದ ಅಪ್ರಚೋದಿತ ದಾಳಿಗೆ 7 ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನವು ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನಫೀಸ್ ಝಕರಿಯಾ ಹೇಳಿದ್ದಾರೆ.

ಇಸ್ಲಾಮಾಬಾದ್ (ನ.14): ತನ್ನ ದೇಶದ 7 ಸೈನಿಕರ ಹತ್ಯೆಗೆ ಭಾರತವನ್ನು ದೂಷಿಸಿರುವ ಪಾಕಿಸ್ತಾನವು ಇಂದು ಭಾರತೀಯ ಹೈಕಮಿಶನರ್ ಗೌತಮ್ ಬಂಬವಾಲೆ ಅವರನ್ನು ಸಮನ್ಸ್ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿನ್ನೆ ರಾತ್ರಿ ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಪಡೆಗಳು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಪಾಕಿಸ್ತಾನದ 7 ಯೋಧರು ಹತರಾಗಿದ್ದಾರೆ ಎಂದು ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ ಇಲಾಖೆಯು ವರದಿ ನೀಡಿತ್ತು.

ಭಾರತದ ಅಪ್ರಚೋದಿತ ದಾಳಿಗೆ 7 ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನವು ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನಫೀಸ್ ಝಕರಿಯಾ ಹೇಳಿದ್ದಾರೆ.

ಸೆ.29ರಂದು ಭಾರತ ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಈವರೆಗೆ ಸುಮಾರು ನೂರಕ್ಕಿಂತಲೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ.