ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕ್ ಸುಳ್ಳುಗಳ ಸರಮಾಲೆ! ಪೇಶಾವರ ಶಾಲೆ ದಾಳಿ ಹಿಂದೆ ಭಾರತದ ಕೈವಾಡ ಎಂದ ಪಾಕ್! ಸುಳ್ಳು ಆರೋಪ ಮಾಡಿದ ಪಾಕ್ ವಿದೇಶಾಂಗ ಸಚಿವ ಷಾ ಮಹಮ್ಮೂದ್​​ ಖುರೇಷಿ! ದಾಳಿಯಲ್ಲಿ ಭಾಗಿಯಾದ ಉಗ್ರರಿಗೆ ಭಾರತದಿಂದ ಬೆಂಬಲ ಎಂದ ಖುರೇಷಿ

ಇಸ್ಲಾಮಾಬಾದ್(ಸೆ.30): ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

Add Asianetnews Kannada as a Preferred SourcegooglePreferred

ಈ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಬೊಟ್ಟು ಮಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮ್ಮೂದ್​​ ಖುರೇಷಿ, ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 

2014ರಲ್ಲಿ ಪೇಶಾವರದ ಸೈನಿಕ ಶಾಲೆ ಮೇಲೆ ನಡೆದ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಖುರೇಷಿ ಗಂಭೀರ ಆರೋಪ ಮಾಡಿದರು. ಈ ಘಟನೆಯಲ್ಲಿ ಸುಮಾರು 150 ಮಕ್ಕಳು ದಾರುಣವಾಗಿ ಸಾವಿಗೀಡಾಗಿದ್ದರು. ಈ ಘಟನೆಯನ್ನು ಪಾಕ್​ ಇಂದಿಗೂ ಮರೆತಿಲ್ಲ. ಈ ದಾಳಿಯಲ್ಲಿ ಭಾಗಿಯಾದ ಉಗ್ರರಿಗೆ ಭಾರತದಿಂದ ಬೆಂಬಲ ದೊರಕಿದೆ ಎಂದು ಖುರೇಷಿ ಆರೋಪಿಸಿದರು.

ಅಂತೆಯೇ ನ್ಯೂಯಾರ್ಕ್​ನಲ್ಲಿ ನಡೆಯ ಬೇಕಿದ್ದ ವಿದೇಶಾಂಗ ಸಚಿವರ ಮಟ್ಟದ ಮಾತುಕತೆ ಮುರಿದುಬೀಳಲು ಭಾರತವೇ ಕಾರಣ ಎಂದು ಆರೋಪಿಸಿರುವ ಖುರೇಷಿ, ಭಾರತ ಶಾಂತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.

ಕಾಶ್ಮೀರ ವಿವಾದ ಬಗೆಹರಿಯುವವರೆಗೂ ದಕ್ಷಿಣ ಏಷ್ಯಾ ಭಾಗದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸದು. ಈ ಸಮಸ್ಯೆಯು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಆಧಾರದ ಮೇಲೆ ಹಾಗೂ ಕಾಶ್ಮೀರಿಗಳ ಇಷ್ಟದಂತೆ ಬಗೆಹರಿಯಬೇಕು ಎಂದು ಖುರೇಷಿ ಆಗ್ರಹಿಸಿದರು.

ಸಾರ್ವಭೌಮ ಸಮಾನತೆ ಮತ್ತು ಪರಸ್ಪರ ಗೌರವ ಆಧಾರದ ಮೇಲೆ ಇಸ್ಲಾಮಾಬಾದ್, ನವದೆಹಲಿಯೊಂದಿಗೆ ಸಂಬಂಧ ಬೆಳೆಸಬೇಕೆಂದುಕೊಂಡಿದೆ. ಗಂಭೀರ ಹಾಗೂ ಸಮಗ್ರವಾದ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದನ್ನು ನಾವು ಎದರು ನೋಡುತ್ತಿದ್ದೇವೆ ಎಂದು ಖುರೇಷಿ ತಿಳಿಸಿದ್ದಾರೆ.

ಇನ್ನು ಪಾಕ್ ಆರೋಪಕ್ಕೆ ತಿರುಗೇಟು ನೀಡಿರುವ ಭಾರತ, ಪಾಕಿಸ್ತಾನ ವಿಶ್ವ ಸಮುದಾಯದ ಮುಂದೆ ಸುಳ್ಳನ್ನೇ ಹೇಳುವುದು ಎಂಬುದು ಮತ್ತೆ ಸಾಬೀತಾಗಿದೆ ಎಂದು ವ್ಯಂಗ್ಯವಾಡಿದೆ.

ವಿಶ್ವಸಂಸ್ಥೆ ವೇದಿಕೆ: ಸುಷ್ಮಾ ರೌದ್ರಾವತಾರಕ್ಕೆ ‘ಪಡೋಸಿ’ ಗಡಗಡ!